Sunday, March 29, 2026
Sunday, March 29, 2026

ತೀರ್ಥಹಳ್ಳಿ to ಶಿವಮೊಗ್ಗ ಕಿಮ್ಮನೆ ಪಾದಯಾತ್ರೆ

Date:

ಬಿಜೆಪಿ ಸರ್ಕಾರದ ದುರಾಡಳಿತ ಖಂಡಿಸಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ತವರು ಗೃಹ ಸಚಿವರ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ಹೋರಾಟ ಆರಂಭವಾಗಲಿದೆ.

ಮಾಜಿ ಸಚಿವ, ಕಾಂಗ್ರೆಸ್‌ ವಕ್ತಾರ ಕಿಮ್ಮನೆ ರತ್ನಾಕರ್ ಗೃಹ ಸಚಿವರ ತವರೂರು ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಿಂದ ಶಿವಮೊಗ್ಗ ತನಕ ಪಾದಯಾತ್ರೆ ನಡೆಸಲಿದ್ದಾರೆ.

ಮೇ 6 ರಿಂದ 10ರ ತನಕ ನಾಲ್ಕು ದಿನಗಳ ಕಾಲ ಈ ಬೃಹತ್ ಪಾದಯಾತ್ರೆ ನಡೆಯಲಿದೆ. ಈ ಮೂಲಕ ಗೃಹ ಸಚಿವರ ವಿರುದ್ಧ ತವರು ಕ್ಷೇತ್ರದಲ್ಲಿಯೇ ದೊಡ್ಡ ಹೋರಾಟವನ್ನು ಪ್ರತಿಪಕ್ಷ ಕಾಂಗ್ರೆಸ್ ಹಮ್ಮಿಕೊಂಡಿದೆ.

ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಿಂದ ಮೇ 6ರಂದು ಆರಂಭವಾಗುವ ಮೌನ ಪ್ರತಿಭಟನೆ ಹೊದಲ ಮಾರ್ಗವಾಗಿ ಬೆಜ್ಜವಳ್ಳಿ, ಮಂಡಗದ್ದೆ, ಸಕ್ರೆಬೈಲು, ಹರಕೆರೆ ಮೂಲಕ ಮೇ 10ರಂದು ಜಿಲ್ಲಾ ಕೇಂದ್ರ ಶಿವಮೊಗ್ಗ ತಲುಪಲಿದೆ.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಈ ಕುರಿತು ಮಾತನಾಡಿದ್ದು, “ಬಿಜೆಪಿ ಸರ್ಕಾರದ ಎಲ್ಲಾ ಅಕ್ರಮಗಳನ್ನು ಬಹಿರಂಗಪಡಿಸುವ ಉದ್ದೇಶದಿಂದ ಮೇ 6 ರಿಂದ 10ರ ತನಕ ಬೃಹತ್ ಪಾದಯಾತ್ರೆ ಚಳವಳಿ ಹಮ್ಮಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...