Thursday, March 5, 2026
Thursday, March 5, 2026

ಕಂದಾಯ ಇಲಾಖೆಗೆ ಭೂಮಿ ಹಸ್ತಾಂತರ ಬಗರ್ ಹುಕುಂ ಸಮಸ್ಯೆ ಕೊಂಚ ಪರಿಹಾರ

Date:

ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ 6 ಲಕ್ಷ ಹೆಕ್ಟೇರ್‌ ಭೂಮಿ ಹಸ್ತಾಂತರವಾಗಲಿದೆ.

ಈ ಪೈಕಿ ಸುಮಾರು 5 ಲಕ್ಷ ಹೆಕ್ಟೇರ್‌ ಅನ್ನು 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವವರಿಗೆ ಹಂಚಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಇಲಾಖೆಯು ತನ್ನ ಅಗತ್ಯಕ್ಕೆ ಬೇಕಾದ ಭೂಮಿ ಯನ್ನು ಹೊರತುಪಡಿಸಿ ಉಳಿದ ಭೂಮಿಯನ್ನು ರೈತರಿಗೆ ಹಂಚಲಿದೆ. ಈ ಮೂಲಕ ಮೈಸೂರು, ಚಾಮರಾಜನಗರ, ಶಿವಮೊಗ್ಗ ಸಹಿತ ರಾಜ್ಯಾದ್ಯಂತ ಇರುವ ಬಗರ್‌ ಹುಕುಂ ಸಮಸ್ಯೆಗೆ ಶಾಶ್ವತ ತೆರೆ ಬೀಳಲಿದೆ ಎಂದು ತಿಳಿಸಿದರು.

ಈ ಮೊದಲು ಡೀಮ್ಡ್ ಫಾರೆಸ್ಟ್‌ ಎಂದು ಗುರುತಿಸಿ ಅರಣ್ಯ ಇಲಾಖೆ ವಶದಲ್ಲಿದ್ದ 6 ಲಕ್ಷ ಹೆಕ್ಟೇರ್‌ ಭೂಮಿ ಈಗ ಕಂದಾಯ ಇಲಾಖೆಗೆ ಹಸ್ತಾಂತರ ವಾಗಲಿದೆ ಎಂದು ಹೇಳಿದರು.

ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ 90 ಸಾವಿರ ಎಕರೆಗೂ ಹೆಚ್ಚು ಭೂಮಿ ಒತ್ತುವರಿ ಯಾಗಿದೆ. ಹೀಗೆ ಒತ್ತುವರಿಯಾದ ಜಮೀನನ್ನು ಒತ್ತುವರಿದಾರರಿಗೇ 30 ವರ್ಷಗಳ ಗುತ್ತಿಗೆ ಆಧಾರದ ಮೇಲೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ 12 ಸಾವಿರ ಎಕರೆ, ಹಾಸನದಲ್ಲಿ 30 ಸಾವಿರ ಎಕರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 45 ಸಾವಿರ ಎಕರೆ ಭೂಮಿ ಒತ್ತುವರಿ ಯಾಗಿದೆ. ಒತ್ತುವರಿಯಾದ ಭೂಮಿಯಲ್ಲಿ ಕಾಫಿ, ಏಲಕ್ಕಿ ಸಹಿತ ಹಲವು ಬೆಳೆಗಳನ್ನು ಬೆಳೆಯ ಲಾಗುತ್ತಿದೆ. ಈ ಪೈಕಿ ಐದು ಎಕರೆಗಿಂತ ಕಡಿಮೆ ಪ್ರಮಾಣದ ಒತ್ತುವರಿ ಮಾಡಿಕೊಂಡವರ ಸಂಖ್ಯೆ ಶೇ. 90ರಷ್ಟಿದೆ ಎಂದು ಸಚಿವರು ವಿವರಿಸಿದರು.

ಕಂದಾಯ ಇಲಾಖೆಗೆ ಮರಳಿ ಬರುವ ಪೈಕಿ ಎಷ್ಟು ಪ್ರಮಾಣದ ಭೂಮಿ ಸರಕಾರದ ಅಗತ್ಯಕ್ಕೆ ಬೇಕು ಎಂದು ಗುರುತಿಸ ಲಾಗುತ್ತಿದ್ದು, ಆಸ್ಪತ್ರೆ ಸಹಿತ ಸಾರ್ವಜನಿಕ ಸೇವೆಯ ಕಟ್ಟಡಗಳಿಗೆ ಇದು ಬಳಕೆಯಾಗಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಫ್ರೆಂಡ್ಸ್ ಸೆಂಟರ್‌ನಿಂದ ಹೋಳಿ ಆಚರಣೆ

ಫ್ರೆಂಡ್ಸ್ ಸೆಂಟರ್ ವತಿಯಿಂದ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ನೂರಾರು ಜನರು...

Public Library Department 2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ – ಆಕ್ಷೇಪಣೆ ಸಲ್ಲಿಸಲು ಅವಕಾಶ

2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ...

Ayushman Bharat ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

Ayushman Bharat ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ...