Thursday, March 19, 2026
Thursday, March 19, 2026

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್

Date:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 324 ಪ್ರೊಬೆಷನರಿ ಅಧಿಕಾರಿ ( PO) ಹುದ್ದೆಗಳ ನೇಮಕಾತಿ ಸೇರಿದಂತೆ 6,328 ಹುದ್ದೆಗಳಿವೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಅರ್ಜಿಯಲ್ಲಿ ಬದಲಾವಣೆ ಮಾಡಲು ಅಕ್ಟೋಬರ್ 25 ರವರೆಗೆ ಕಾಲಾವಕಾಶ ನೀಡಲಾಗಿದೆ.

ಪರಿಶಿಷ್ಟ ಜಾತಿ (SC ) 162
ಇತರೆ ಹಿಂದುಳಿದ ವರ್ಗಗಳಿಗೆ ( ‌OBC) 560
ಆರ್ಥಿಕವಾಗಿ ದುರ್ಬಲ ವಿಭಾಗ (EWS ) ‌‌200
ಸಾಮಾನ್ಯ ವರ್ಗಕ್ಕೆ 810 ಹುದ್ದೆಗಳಿವೆ.

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಹೊಂದಿರಬೇಕು. ತಮ್ಮ ಪದವಿಯ ಅಂತಿಮ ವರ್ಷ ಅಥವಾ ಸೆಮಿಸ್ಟರ್ ನಲ್ಲಿರುವವರು ಸಂದರ್ಶನಕ್ಕೆ ಕರೆದರೆ, ಅವರು ಡಿಸೆಂಬರ್ 31, 2021 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂಬುದಕ್ಕೆ ಪುರಾವೆಯನ್ನು ಹಾಜರುಪಡಿಸಬೇಕಾಗುತ್ತದೆ ಎಂಬ ಷರತ್ತಿಗೆ ಒಳಪಟ್ಟು ಅರ್ಜಿ ಸಲ್ಲಿಸಬಹುದು.
ಇಂಟಿಗ್ರೇಟೆಡ್ ಡುಯಲ್ ಡಿಗ್ರಿ (ಐಡಿಡಿ) ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಐಡಿಡಿ ಉತ್ತಿರ್ಣ ಗೊಳಿಸಿರುವ ದಿನಾಂಕ ಡಿಸೆಂಬರ್ 31, 2021 ರಂದು ಅಥವಾ ಅದಕ್ಕೂ ಮೊದಲು ಇರಬೇಕು ಎಂಬುದನ್ನು ಗಮನಿಸಬೇಕು.

ವಯೋಮಿತಿ

ಅಭ್ಯರ್ಥಿಯು ಏಪ್ರಿಲ್ 1, 2021 ರಂತೆ 21 ವರ್ಷಕ್ಕಿಂತ ಕಡಿಮೆ ಇರಬಾರದು.
30 ವರ್ಷಗಳಿಗಿಂತ ಮೇಲ್ಪಟ್ಟವರಾಗಿರಬಾರದು.
ಎಸ್ಸಿ, ಎಸ್ಟಿ, ಓಬಿಸಿ, ಪಿಡಬ್ಲ್ಯೂಡಿ, ಮಾಜಿ ಸೈನಿಕರು ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳ ಆಯ್ಕೆಯನ್ನು ಪ್ರಿಲಿಮ್ಸ್, ಮೈನ್ಸ್, ಮತ್ತು ಸಂದರ್ಶನದ ಆಧಾರದ ಮೇಲೆ ಮಾಡಲಾಗುತ್ತದೆ. ಫೀಲಿಮ್ಸ್ ನಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಮುಂದಿನ ನೇಮಕಾತಿ ಪ್ರಕ್ರಿಯೆಗೆ ಕರೆಯಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ ಮತ್ತು ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು www.sbi.co.in ಜಾಲತಾಣಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮತ್ತು ಅಧಿಸೂಚನೆ ಸಂಬಂಧಿಸಿದಂತೆ ವಿವರವನ್ನು ಪಡೆಯಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...