Saturday, February 28, 2026
Saturday, February 28, 2026

ಅನಾಥಮಕ್ಕಳಿಗೆ ಆಹ್ಲಾದ ತಂದ ಮಂಗಳೂರು ಡಿಸಿ ಡಾ.ರಾಜೇಂದ್ರ

Date:

ಮಂಗಳೂರು ನಗರದ ಬೊಂದೇಲ್‌ನಲ್ಲಿ ಇರುವ ಬಾಲಕರ ಬಾಲ ಮಂದಿರದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸೇರಿದ 6ರಿಂದ 17 ವರ್ಷದೊಳಗಿನ 13 ಅನಾಥ ಮಕ್ಕಳಿದ್ದು, ಅವರನ್ನು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸ ಕರೆದೊಯ್ದಿದ್ದರು.

ಈ ಮಕ್ಕಳಿಗೆ ಪೋಷಕರಿಲ್ಲದ ನೋವು ಕಾಡಬಾರದೆಂದು ಮಂಗಳವಾರ ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸ ಕರೆದೊಯ್ಯಲಾಗಿತ್ತು. ಜಿಲ್ಲಾಧಿಕಾರಿಯವರೇ ಈ ಮಕ್ಕಳ ವಾಹನ, ಊಟ-ಉಪಾಹಾರ ವ್ಯವಸ್ಥೆ ಕಲ್ಪಿಸಿದ್ದರು.

ಸಂಜೆ ಸ್ವತಃ ಪಿಲಿಕುಳಕ್ಕೆ ಆಗಮಿಸಿ ಮಕ್ಕಳೊಂದಿಗೆ ಕಾಲ ಕಳೆದರು. ಪಿಲಿಕುಳ ನಿಸರ್ಗಧಾಮದ ಆಯುಕ್ತ ವೆಂಕಟೇಶ್‌, ನಿರ್ದೇಶಕರು, ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬಂದಿ ಮಕ್ಕಳಿಗೆ ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಿದರು.

ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ಯಮುನಾ, ಮಕ್ಕಳ ರಕ್ಷಣ ವಿಭಾಗದ ಸಿಬಂದಿ ಸಂಧ್ಯಾ, ಸೌಭಾಗ್ಯಾ, ಪ್ರತಿಮಾ, ದೀಕ್ಷಾ, ಅಧೀಕ್ಷಕ ಶ್ರೀಧರ್‌, ರಕ್ಷಕ ತಾರಾನಾಥ್‌, ಸ್ವತ್ಛತ ಸಿಬಂದಿ ಲವೀನಾ ಹಾಗೂ ಬಾಲ ಮಂದಿರದ ಸಿಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಶಿವಮೊಗ್ಗದ ಶ್ರೀಮತಿ ನಿರ್ಮಲಾ ಮಹೇಂದ್ರ ಭೂಪಾಳಂ ನಿಧನ.

Shimoga News ನಗರದ ವಾಣಿಜ್ಯೋದ್ಯಮ ಕುಟುಂಬದ ದಿವಂಗತ ಮಹೇಂದ್ರ ಭೂಪಾಳಂ ಅವರ...

Shimoga News ಖಾಸಗಿ ಸಂಸ್ಥೆಗಳು ಸಮಾಜಮುಖಿ ಕಾರ್ಯಗಳಲ್ಲಿ ತೊಡಗುವುದು ಶ್ಲಾಘನೀಯ- ಸಂಸದ ರಾಜಶೇಖರ ಹಿಟ್ನಾಳ್.

Shimoga News ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ವಿಕಲಚೇತನರಿಗೆ...