Thursday, December 18, 2025
Thursday, December 18, 2025

ರಾಜ್ಯದಲ್ಲಿ 750 ಹಳ್ಳಿಗಳು ಅಮೃತಗ್ರಾಮ ಯೋಜನೆಗೆ ಆಯ್ಕೆ

Date:

ದೇಶದ 75ನೇ ಸ್ವಾತಂತ್ರ್ಯ ಮಹೋತ್ಸವದ ನೆನಪಿಗೆ ಕಳೆದ ವರ್ಷ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದ ಅಮೃತ ಗ್ರಾಮ ಪಂಚಾಯಿತಿ ಯೋಜನೆಯ ಪ್ರಥಮ ಹಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೊಸದಾಗಿ 750 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿ, ಸಮಗ್ರ ಅಭಿವೃದ್ಧಿ ಮಾಡಲು ಉದ್ದೇಶಿಸಲಾಗಿದೆ.

ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿಗಳಲ್ಲಿ ಬೀದಿ ದೀಪಗಳು ಅಥವಾ ಸೋಲಾರ್‌ ಬೀದಿ ದೀಪಗಳು, ಪ್ರತಿ ಮನೆಗೆ ಕುಡಿಯುವ ನೀರಿನ ನಳ ಸಂಪರ್ಕ, ಶೇ. 100 ರಷ್ಟು ಘನತ್ಯಾಜ್ಯ ವಿಂಗಡಣೆ ಮತ್ತು ವಿಲೇವಾರಿ, ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಸರ್ಜಿಸುವುದು. ಗ್ರಾ.ಪಂ. ಕಟ್ಟಡಗಳಲ್ಲಿ ಸೌರ ವಿದ್ಯುತ್‌ ಅಳವಡಿಕೆ, ಅಮೃತ ಉದ್ಯಾನವನ, ಗ್ರಾ.ಪಂ. ಗ್ರಂಥಾಲಯದ ಡಿಜಿಟಲೀಕರಣ, ಶಾಲೆ ಅಥವಾ ಅಂಗನವಾಡಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಶಾಲೆಗಳಲ್ಲಿ ಆಟದ ಮೈದಾನ ಮತ್ತು ಆವರಣ ಗೋಡೆಗಳನ್ನು ನಿರ್ಮಾಣ, ಕೆರೆಗಳು ಮತ್ತು ಕಲ್ಯಾಣಿಗಳ ಪುನಶ್ಚೇತನಗೊಳಿಸಲಾಗುತ್ತದೆ.ಜೊತೆಗೆ ಗ್ರಾಮಗಳ ಇತರ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...