Saturday, May 23, 2026
Saturday, May 23, 2026

ಕೇದಾರನಾಥ ದೇಗುಲದ ಬಾಗಿಲು ತೆರೆದಿವೆ

Date:

ಸುಪ್ರಸಿದ್ಧ ಕೇದಾರನಾಥ ಧಾಮ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.
ಬೆಳಗ್ಗೆ ದೇಗುಲದ ಬಾಗಿಲು ತೆರೆಯುವುದಕ್ಕೂ ಮುಂಚಿತವಾಗಿ ಧಾರ್ಮಿಕ ವಿಧಿ ಮತ್ತು ವೈದಿಕ ಮಂತ್ರಗಳ ಪಠಣ ನಡೆಯಿತು. ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಉಪಸ್ಥಿತರಿದ್ದರು.

ಪುರಾಣಪ್ರಸಿದ್ಧ ದೇವಸ್ಥಾನವನ್ನು 15 ಕ್ವಿಂಟಲ್​ ಹೂವುಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಕೇದಾರನಾಥನ ದರ್ಶನ ಭಾಗ್ಯಕ್ಕೆ ಹಾತೊರೆಯುತ್ತಿದ್ದಾರೆ.ದೇವಾಲಯ ಓಪನ್​ ಆಗ್ತಿದ್ದಂತೆ ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಪೂಜೆ ಸಹ ಸಲ್ಲಿಸಲಾಗಿದೆ.

ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಮತ್ತು ಬದರಿನಾಥ ದರ್ಶನಕ್ಕೆ ನಿಗದಿತ ಕಾಲಮಿತಿಯಲ್ಲಿ ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಚಾರ್​ ಧಾಮ್​ಗೆ ತೆರಳುವ ಯಾತ್ರಿಗಳು ಆನ್​ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ದೇಗುಲದ ವೆಬ್​ಸೈಟ್​ಗೆ ಭೇಟಿ ನೀಡಬೇಕಾಗುತ್ತದೆ.

ಬದರಿನಾಥಕ್ಕೆ 15,000, ಕೇದಾರನಾಥಕ್ಕೆ 12,000, ಗಂಗೋತ್ರಿಗೆ 7,000 ಮತ್ತು ಯಮುನೋತ್ರಿಗೆ 4,000 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಈ ಸ್ಥಳಗಳಿಗೆ ಭೇಟಿ ನೀಡಲು ಕೋವಿಡ್ ಪರೀಕ್ಷೆ ಕಡ್ಡಾಯ. ಲಸಿಕೆ ಪಡೆದುಕೊಂಡಿರುವ ಪ್ರಮಾಣ ಪತ್ರ ಒದಗಿಸುವುದು ಕೂಡಾ ಅವಶ್ಯಕವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರ

Araga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ...

Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27...

Nidhi Apke Nikat ಮೇ 27 .ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಿಧಿ ಆಪ್ ಕೆ ನಿಕಟ್ 2.0 ಕಾರ್ಯಕ್ರಮ

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ...

Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್...