Sunday, December 14, 2025
Sunday, December 14, 2025

ಕೇದಾರನಾಥ ದೇಗುಲದ ಬಾಗಿಲು ತೆರೆದಿವೆ

Date:

ಸುಪ್ರಸಿದ್ಧ ಕೇದಾರನಾಥ ಧಾಮ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.
ಬೆಳಗ್ಗೆ ದೇಗುಲದ ಬಾಗಿಲು ತೆರೆಯುವುದಕ್ಕೂ ಮುಂಚಿತವಾಗಿ ಧಾರ್ಮಿಕ ವಿಧಿ ಮತ್ತು ವೈದಿಕ ಮಂತ್ರಗಳ ಪಠಣ ನಡೆಯಿತು. ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಉಪಸ್ಥಿತರಿದ್ದರು.

ಪುರಾಣಪ್ರಸಿದ್ಧ ದೇವಸ್ಥಾನವನ್ನು 15 ಕ್ವಿಂಟಲ್​ ಹೂವುಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಕೇದಾರನಾಥನ ದರ್ಶನ ಭಾಗ್ಯಕ್ಕೆ ಹಾತೊರೆಯುತ್ತಿದ್ದಾರೆ.ದೇವಾಲಯ ಓಪನ್​ ಆಗ್ತಿದ್ದಂತೆ ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಪೂಜೆ ಸಹ ಸಲ್ಲಿಸಲಾಗಿದೆ.

ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಮತ್ತು ಬದರಿನಾಥ ದರ್ಶನಕ್ಕೆ ನಿಗದಿತ ಕಾಲಮಿತಿಯಲ್ಲಿ ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಚಾರ್​ ಧಾಮ್​ಗೆ ತೆರಳುವ ಯಾತ್ರಿಗಳು ಆನ್​ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ದೇಗುಲದ ವೆಬ್​ಸೈಟ್​ಗೆ ಭೇಟಿ ನೀಡಬೇಕಾಗುತ್ತದೆ.

ಬದರಿನಾಥಕ್ಕೆ 15,000, ಕೇದಾರನಾಥಕ್ಕೆ 12,000, ಗಂಗೋತ್ರಿಗೆ 7,000 ಮತ್ತು ಯಮುನೋತ್ರಿಗೆ 4,000 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಈ ಸ್ಥಳಗಳಿಗೆ ಭೇಟಿ ನೀಡಲು ಕೋವಿಡ್ ಪರೀಕ್ಷೆ ಕಡ್ಡಾಯ. ಲಸಿಕೆ ಪಡೆದುಕೊಂಡಿರುವ ಪ್ರಮಾಣ ಪತ್ರ ಒದಗಿಸುವುದು ಕೂಡಾ ಅವಶ್ಯಕವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...

Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.

Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಕೆನರಾ ಬ್ಯಾಂಕ್...