Wednesday, March 25, 2026
Wednesday, March 25, 2026

ಬೆಳಗಾವಿಯಲ್ಲಿ ಶ್ರೀಶಂಕರ ಜಯಂತಿ

Date:

ಯಾವುದೇ ಯಶಸ್ಸು ಕೈಗೂಡಬೇಕಾದರೆ ಶ್ರಮದ ಜೊತೆಗೆ ದೇವರ ಆಶೀರ್ವಾದವೂ ಇರಬೇಕಾಗುತ್ತದೆ. ಅಂತಹ ದೇವರ ಸಾನಿಧ್ಯವನ್ನು ಕರುಣಿಸುವಲ್ಲಿ ಶಂಕರಾಚಾರ್ಯರ ಚಿಂತನೆ, ತತ್ವಗಳು ಪೂರಕವಾಗಿವೆ ಎಂದು ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ಅಭಿಪ್ರಾಯಪಟ್ಟರು.

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಬಸವರಾಜ ಕಟ್ಟೀಮನಿ ಸಭಾ ಭವನದಲ್ಲಿ ಶುಕ್ರವಾರ (ಮೇ.06) ನಡೆದ ಶ್ರೀ ಶಂಕರಾಚಾರ್ಯರ ಜಯಂತ್ಯೋತ್ಸವ-2022 ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಪೂರ್ತಿ ಸುತ್ತಿದ ಸಂತ ಶಂಕರಾಚಾರ್ಯರು ಹಿಂದೂ ಧರ್ಮದ ಕುರಿತಾಗಿ ಜಾಗೃತಿ ಮೂಡಿಸುವ ಜೊತೆಗೆ ಶಾಂತಿ, ಸಹನೆ, ಸಂಘಟನೆ, ಮಾನವತ್ವದ ತತ್ವಗಳನ್ನು ಸಾರಿದರು ಎಂದು ಹೇಳಿದರು.

ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಸಂಚಾರ ಕೈಗೊಂಡ ಸಚ್ಚಿದಾನಂದ ಶಂಕರಾಚಾರ್ಯರು ಹಿಂದೂ ಧರ್ಮದ ಸಂಘಟನೆಗಾಗಿ ಅವಿರತ ಶ್ರಮಿಸಿದರು‌. ಆವತ್ತು ಶಂಕರಾಚಾರ್ಯರು ಪರಿಚಯಿಸಿ, ಪಸರಿಸಿದ ಉದಾತ್ತ ತತ್ವಗಳು ಇವತ್ತಿಗೂ ಸಮಾಜಕ್ಕೆ ಸೂಕ್ತವಾಗಿವೆ ಎಂದು ಡಾ‌. ನರೇಂದ್ರ ನಾರಾಯಣ ವಾಳೇಕರ ಅವರು ಹೇಳಿದರು.

ಜಯಂತ್ಯೋತ್ಸವದಲ್ಲಿ ಶಂಕರಾಚಾರ್ಯರ ಕುರಿತಾಗಿ ಉಪನ್ಯಾಸ ನೀಡಿದ ಅವರು ಹಿಂದೂ ಧರ್ಮದ ಜಾಗೃತಿ, ಸಂಘಟನೆಗಾಗಿ ಇವತ್ತು ನಡೆಯುತ್ತಿರುವ ಅನೇಕ ಹೋರಾಟಗಳಿಗೆ ಶಂಕರಾಚಾರ್ಯರ ಚಿಂತನೆಗಳು ಮಾರ್ಗದರ್ಶಕ ವಾಗಿವೆ ಎಂದು ಹೇಳಿದರು.

ಶಂಕರಾಚಾರ್ಯರ ಜಯಂತ್ಯೋತ್ಸವ ಹಿನ್ನೆಲೆಯಲ್ಲಿ ಕುಮಾರ ಗಂಧರ್ವ ರಂಗಮಂದಿರದಿಂದ ಬಸವರಾಜ ಕಟ್ಟೀಮನಿ ಸಭಾಭವನದವರೆಗೆ ಸಂತ ಶಂಕರಾಚಾರ್ಯರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.

ಭಾವಚಿತ್ರ ಮೆರವಣಿಗೆ ನಂತರ ಸಭಾಭವನದಲ್ಲಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಪೂಜೆ ನೆರವೇರಿಸಲಾಯಿತು. ನಂತರದಲ್ಲಿ ಸಮಾಜದ ಸುಮಂಗಲೆಯರು ತೊಟ್ಟಿಲಲ್ಲಿ ಶಂಕರಾಚಾರ್ಯರ ಪುಟ್ಟ ಮೂರ್ತಿ ಇಟ್ಟು ತೂಗುವ ಮೂಲಕ ಸಾಂಪ್ರದಾಯಿಕವಾಗಿ ನಾಮಕರಣ ಮಾಡಿದರು.

ಆಕಾಶವಾಣಿ ಮತ್ತು ದೂರದರ್ಶನ ಕಲಾವಿದರಾದ ಶ್ರೀರಂಗ ಜೋಶಿ ಪ್ರಾರ್ಥನೆ, ನಾಡಗೀತೆ, ಭಕ್ತಿಗೀತೆ ಪ್ರಸ್ತುತ ಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಕಾರ್ಯಕ್ರಮದಲ್ಲಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ವಮಂಗಳ ಅರಳೀಕಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಮಾಜದ ಮುಖಂಡರಾದ ಗುರುರಾಜ ಜೋಶಿ, ಬಿ.ಆರ್.ಪಾಟೀಲ, ವೆಂಕಟೇಶ ಕುಲಕರ್ಣಿ, ಪದ್ಮಜಾ ಕುಲಕರ್ಣಿ, ಉಮಾ ದೇಶಪಾಂಡೆ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...