Wednesday, March 25, 2026
Wednesday, March 25, 2026

ರಾಜ್ಯದಲ್ಲಿ ಕೋವಿಡ್ ಪೂರ್ಣ ಹೋಗಿಲ್ಲ ಎಚ್ಚರಿಕೆಯಿರಲಿ

Date:

ಜೂನ್​ನಲ್ಲಿ ಕೋವಿಡ್​ ನಾಲ್ಕನೇ ಅಲೆ ಬರುವ ಸಾಧ್ಯತೆ ಕುರಿತು ತಜ್ಞರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್​ ಸೋಂಕು ಪ್ರಕರಣಗಳು ಹೆಚ್ಚುತ್ತಿದೆ. ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ (1,854ಕ್ಕೆ ಏರಿಕೆ) ಕರ್ನಾಟಕ ನಾಲ್ಕನೇ ಸ್ಥಾನಕ್ಕೇರಿರುವುದು ಆತಂಕಕ್ಕೆ ಕಾರಣವಾಗಿದೆ.

ದೆಹಲಿ ಕೋವಿಡ್​ ಸಕ್ರಿಯ ಪ್ರಕರಣಗಳಲ್ಲಿ (5,746 )ಮೊದಲ ಸ್ಥಾನದಲ್ಲಿದ್ದರೆ, ಕೇರಳ (2,888) 2 ಹಾಗೂ ಹರಿಯಾಣ (2,535) 3ನೇ ಸ್ಥಾನದಲ್ಲಿದೆ. ಕರ್ನಾಟಕದ ಬಳಿಕ ಉತ್ತರ ಪ್ರದೇಶ (1,742) 5ನೇ ಸ್ಥಾನ ಹಾಗೂ ಮಹಾರಾಷ್ಟ್ರ (1,109) 6ನೇ ಸ್ಥಾನದಲ್ಲಿದೆ. ಉಳಿದಂತೆ 18 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 500ಕ್ಕಿಂತ ಕಡಿಮೆ ಇದೆ. 8 ರಾಜ್ಯಗಳಲ್ಲಿ ಒಂದಂಕಿ ಇದೆ.

ಕರ್ನಾಟಕದಲ್ಲಿ ಕಳೆದ ಎರಡು ತಿಂಗಳಲ್ಲಿ 6 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣ ವರದಿಯಾಗಿದ್ದು, 65 ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ನೆರೆಯ ಕೇರಳದಲ್ಲಿ ಸೋಂಕಿನ ಪ್ರಮಾಣದ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚಿದ್ದು, ಮೇ 3ರಂದು ಒಂದೇ ದಿನ 52 ಸಾವು ಹಾಗೂ ಮೇ 5ರಂದು 26 ಸಾವು ಸಂಭವಿಸಿದೆ.

ರಾಜ್ಯದಲ್ಲಿ ಕೋವಿಡ್​ ಸೋಂಕು ತಗ್ಗಿದೆಯಾದರೂ ಸಂಪೂರ್ಣ ಹೋಗಿಲ್ಲ. ಹಾಗಾಗಿ ಜನರು ರ್ನಿಲಕ್ಷ್ಯ ಮಾಡದೆ ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿ ಇನ್ನೂ ಕೆಲ ಕಾಲ ಕೋವಿಡ್​ ನಿಯಮ ಪಾಲಿಸುವ ಅಗತ್ಯವಿದೆ. ಜತೆಗೆ ಜನರೇ ಸ್ವಯಂ ಪ್ರೇರಿತರಾಗಿ ಮುನ್ನೆಚ್ಚರಿಕೆ ಡೋಸ್​ ಲಸಿಕೆ ಪಡೆಯುವುದು ಸೂಕ್ತ ಎಂದು ಕೋವಿಡ್​ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷಡಾ. ಎಂ.ಕೆ. ಸುದರ್ಶನ್​ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...