Saturday, October 5, 2024
Saturday, October 5, 2024

ದೇಶದಾದ್ಯಂತ 190 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ

Date:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 3,805 ಹೊಸ ಕೇಸುಗಳು ಪತ್ತೆಯಾಗಿದೆ, ನಿನ್ನೆ ಶುಕ್ರವಾರ ದೇಶದಲ್ಲಿ 3,545 ಕೋವಿಡ್ ಕೇಸುಗಳು ವರದಿಯಾಗಿದ್ದವು.

ಒಂದೇ ದಿನದಲ್ಲಿ 22 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,24,024ಕ್ಕೇರಿದೆ.

ಈಗ ದೇಶದಲ್ಲಿ ಒಟ್ಟಾರೆ ಕೋವಿಡ್ ಸೋಂಕಿತರ ಸಂಖ್ಯೆ 4 ಕೋಟಿಯ 30 ಲಕ್ಷದ 98 ಸಾವಿರದ 743ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 20 ಸಾವಿರದ 303 ಆಗಿದೆ. ಅದು ಒಟ್ಟಾರೆ ಕೇಸಿನ ಶೇ. 0.05ರಷ್ಟಿದೆ.

ದೇಶದಲ್ಲಿ ಕೋವಿಡ್ ನಿಂದ ಗುಣಮುಖ ಹೊಂದುತ್ತಿರುವವರ ಪ್ರಮಾಣ ಶೇ. 98.74ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಗುಣಮುಖ ಹೊಂದಿದವರ ಸಂಖ್ಯೆ 3,168 ಆಗಿದೆ. ಒಟ್ಟಾರೆಯಾಗಿ ಇದುವರೆಗೆ ಗುಣಮುಖರಾದವರ ಸಂಖ್ಯೆ 4 ಕೋಟಿಯ 25 ಲಕ್ಷದ 54 ಸಾವಿರದ 416 ಆಗಿದೆ.

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4 ಲಕ್ಷದ 87 ಸಾವಿರದ 544 ಮಂದಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಕೊರೋನಾ ಪಾಸಿಟಿವ್ ದರ ಶೇ. 0.78ರಷ್ಟಾಗಿದೆ. ವಾರದಲ್ಲಿ ಕೊರೋನಾ ಪಾಸಿಟಿವ್ ದರ ಶೇ. 0.79ರಷ್ಟಿದೆ.

ಇನ್ನು ದೇಶಾದ್ಯಂತ ಕೊರೋನಾ ಲಸಿಕೆ ಅಭಿಯಾನವನ್ನು ತೆಗೆದುಕೊಂಡರೆ 190 ಕೋಟಿ ಲಸಿಕೆ ಡೋಸ್ ಗಳನ್ನು ಇದುವರೆಗೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...