Thursday, December 18, 2025
Thursday, December 18, 2025

ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಘೋಷಣೆ

Date:

ಆರ್ಥಿಕವಾಗಿ ದಿವಾಳಿ ಹೊಂದಿರುವ ಶ್ರೀಲಂಕಾದಲ್ಲಿ 5 ವಾರಗಳಲ್ಲಿ 2ನೇ ಬಾರಿಗೆ ದ್ವೀಪರಾಷ್ಟ್ರದಲ್ಲಿ ನಿನ್ನೆ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಅಧ್ಯಕ್ಷ ಗೊಟಬೊಯ ರಾಜಪಕ್ಷ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ರಾಜಪಕ್ಷ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಭದ್ರತಾ ಪಡೆಗಳಿಗೆ ಹೆಚ್ಚಿನ ಅಧಿಕಾರ ನೀಡಿ, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವರದಿ ವಿವರಿಸಿದೆ.

ಪ್ರಸ್ತುತ ರಾಜಪಕ್ಷ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಶುಕ್ರವಾರ ಬೆಳಗ್ಗೆ ಪಾರ್ಲಿಮೆಂಟ್ ಮುಂಭಾಗದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದರು. ಅಂಗಡಿ, ಮುಂಗಟ್ಟು, ಸಾರಿಗೆಯನ್ನು ಬಂದ್ ಮಾಡಿದೆ. ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ದೇಶಾದ್ಯಂತ ಕಠಿಣ ಕಾನೂನನ್ನು ಜಾರಿಗೊಳಿಸಲಾಗಿದೆ ಎಂದು ಅಧ್ಯಕ್ಷ ಗೊಟಬೊಯ ವಕ್ತಾರ ತಿಳಿಸಿದ್ದಾರೆ.

ರಾಜಪಕ್ಷ ವಿರುದ್ಧ ದಂಗೆ ಎದ್ದಿರುವ ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರನ್ನು ಬಂಧಿಸಿ ಯಾವುದೇ ನ್ಯಾಯಾಂಗ ವಿಚಾರಣೆ ಇಲ್ಲದೇ ದೀರ್ಘಕಾಲದವರೆಗೆ ಜೈಲಿನಲ್ಲಿಡುವ ಅಧಿಕಾರವನ್ನು ತುರ್ತುಪರಿಸ್ಥಿತಿ ಘೋಷಿಸಿ, ಭದ್ರತಾ ಪಡೆಗಳಿಗೆ ವಿಶೇಷ ಅಧಿಕಾರವನ್ನು ನೀಡಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು ದೇಶಾದ್ಯಂತ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ತುರ್ತು ಸೇವೆ ಮತ್ತು ಸಾರ್ವಜನಿಕ ವ್ಯವಸ್ಥೆಯ ನಿರ್ವಹಣೆ ಸುಗಮವಾಗಿ ನಡೆಯಲು ಅಧ್ಯಕ್ಷ ಗೊಟಬೊಯ ಅವರು ತಮ್ಮ ವಿಶೇಷ ಅಧಿಕಾರವನ್ನು ಬಳಸಿ ತುರ್ತುಪರಿಸ್ಥಿತಿ ಜಾರಿಗೊಳಿಸಿರುವುದಾಗಿ ವರದಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...