ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾನುವಾರ ಸಂಜೆ ವೇಳೆಗೆ ಚಂಡಮಾರುತ ಉಂಟಾಗಲಿದೆ. ಇದು ಗಂಟೆಗೆ 75 ಕಿ.ಮೀ. ವೇಗದಲ್ಲಿ ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತಕ್ಕೆ ಅಸನಿ ಎಂದು ನಾಮಕರಣ ಮಾಡಲಾಗಿದೆ. ಸಿಂಹಳ ಭಾಷೆಯಲ್ಲಿ ಇದರ ಅರ್ಥ ಕ್ರೋಧ. ಇದು ತೀವ್ರ ಸ್ವರೂಪದಲ್ಲಿರಲಿದ್ದು ಇದು ಋತುಮಾನದ ಮೊದಲ ಚಂಡಮಾರುತವಾಗಿದೆ.
ಪೂರ್ವ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾನುವಾರ ಚಂಡಮಾರುತ ಉಂಟಾಗಲಿದೆ. ನಂತರ ಇದು ಮೇ 10ರವರೆಗೆ ಈಶಾನ್ಯ ಭಾಗಕ್ಕೆ ಮುಂದುವರಿದು ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಗಳಿಗೆ ಅಪ್ಪಳಿಸಲಿದೆ ಎಂದು ಐಎಂಡಿ ಪ್ರಕಟಣೆಯಿಂದ ಮಾಹಿತಿ ತಿಳಿದು ಬಂದಿದೆ.