Monday, December 15, 2025
Monday, December 15, 2025

ಹಲವು ಘಟಾನುಘಟಿಗಳು ಬಿಜೆಪಿಗೆ ನೂತನ ಗೃಹಪ್ರವೇಶ

Date:

ರಾಜ್ಯ ವಿಧಾನಸಭಾ ಚುನಾವಣೆಗೆ ವರ್ಷ ಬಾಕಿಯಿರುವಾಗಲೇ, ಬಿಜೆಪಿ ಪಕ್ಷಕ್ಕೆ ಸಂಘಟನೆ ಚುರುಕುಗೊಳಿಸಿದೆ. ಈ ಬೆನ್ನಲ್ಲೇ ಬೇರೆ ಪಕ್ಷಗಳಿಂದ ರಾಜಕೀಯ ನಾಯಕರನ್ನು ಸೆಳೆಯುವ ಕಾರ್ಯವನ್ನು ಮುಂದುವರೆಸಿದೆ.

ಬೆಂಗಳೂರು ನಗರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಹತ್ವದ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಸಚಿವರಾದಂತ ಡಾ.ಕೆ.ಸುಧಾಕರ್, ಮುನಿರತ್ನ, ಗೋಪಾಲಯ್ಯ ಸಮ್ಮುಖದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಮಾಜಿ ಶಾಸಕ ಮಂಜುನಾಥ್ ಬಿಜೆಪಿ ಸೇರ್ಪಡೆಗೊಂಡರು.

ಮಂಡ್ಯ ಹಾಗೂ ಕೋಲಾರ ಜಿಲ್ಲೆಯಲ್ಲಿ ಪಕ್ಷ ಬಲ ಪಡಿಸೋ ನಿಟ್ಟಿನಲ್ಲಿ ಮಹತ್ವದ ತಂತ್ರ ಹೆಣೆದಿದೆ. ಈ ನಿಟ್ಟಿನಲ್ಲಿಯೇ ಇಂದು ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಮಾಜಿ ಶಾಸಕ ಮಂಜುನಾಥ್ ಗೌಡ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇವರಲ್ಲದೇ ಮಾಜಿ ಐಆರ್ ಎಸ್ ಅಧಿಕಾರಿ ಲಕ್ಷ್ಮೀ ಹಾಗೂ ಮಾಜಿ ಸಚಿವ ಎಸ್ ಡಿ ಜಯರಾಂ ಅವರ ಪುತ್ರ, ಅಶೋಕ್ ಜಯರಾಂ ಕೂಡ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದರು.

ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೂಡ, ಕಾಂಗ್ರೆಸ್ ತೊರೆದ ಒಂದೇ ಗಂಟೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

ಹೀಗೆ ಘಟಾನುಘಟಿ ನಾಯಕರು ಕಾಂಗ್ರೆಸ್ ಹಾಗೂ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಿಂದ, ಉಭಯ ಪಕ್ಷಗಳಲ್ಲಿ ಈಗ ಚುನಾವಣೆಗೆ ಮುನ್ನವೇ ಆತಂಕ ಹೆಚ್ಚಾಗಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...