Tuesday, August 25, 2026
Tuesday, August 25, 2026

ಶಿವಮೊಗ್ಗದಲ್ಲಿ ಕಾರಿಗೆ ಕಲ್ಲೇಟು ಬಿಗುವಿನ ವಾತಾವರಣ

Date:

ಶಿವಮೊಗ್ಗದ ಸೂಳೆಬೈಲು ಸಮೀಪದ ಇಂದಿರಾ ನಗರದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಕಾರಿನ ಗಾಜು ಪುಡಿಯಾಗಿದೆ. ಇದರಿಂದ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜನರು ಗುಂಪು ಗೂಡಿದರು. ಹಾಗಾಗಿ ಸೂಳೆಬೈಲಿನಲ್ಲಿ ಗೊಂದಲ ಸೃಷ್ಟಿಯಾಯಿತು. ಕೂಡಲೇ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ.

ಹಿಂದೂ ಸಂಘಟನೆ ಪ್ರಮುಖರು, ಕಾರ್ಯಕರ್ತರು ಸೂಳೆಬೈಲಿನಲ್ಲಿ ಜಮಾಯಿಸಿದರು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಅಂಗಡಿ ಮುಂಗಟ್ಟು ಬಂದ್ ಮಾಡಿಸಿದರು. ಗುಂಪು ಸೇರದಂತೆ ನಿಯಂತ್ರಿಸಿದರು.

ಶಿವಮೊಗ್ಗದಿಂದ ಕಾರು ಮತ್ತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಮತ್ತೂರಿನಲ್ಲಿರುವ ತಮ್ಮ ಸಂಬಂಧಿಯ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ಇನ್ನು ಕಾರಿಗೆ ಕಲ್ಲು ತೂರಿದ ವಿಚಾರ ಗೊತ್ತಾಗುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದರು. ಸೂಕ್ತ ಬಂದೋಬಸ್ತ್ ಕೈಗೊಂಡಿದ್ದಾರೆ.

ತುಂಗಾ ನಗರ ಠಾಣೆ ಪೊಲೀಸರು ಸೇರಿದಂತೆ ಹೆಚ್ಚುವರಿ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಿದ್ದಾರೆ.
ಮತ್ತೊಂದೆಡೆ ಹಿಂದೂ ಸಂಘಟನೆ, ಬಿಜೆಪಿ ಮುಖಂಡರು, ಕಾರ್ಯಕರ್ತರು ದೂರು ನೀಡಲು ರಾತ್ರೋರಾತ್ರಿ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಭೇಟಿಗೆ ನೀಡಲು ನಿರ್ಧರಿಸಿದ್ದರು. ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಅವರು ಭೇಟಿ ನೀಡಿದ್ದರಿಂದ ಅಲ್ಲಿಯೇ ಅವರನ್ನು ಭೇಟಿಯಾದರು.

ಸೂಳೆಬೈಲು ರಸ್ತೆಯಲ್ಲಿನ ಪರಿಸ್ಥಿತಿ ಕುರಿತು ಮಾಹಿತಿ ನೀಡಿದರು.ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಕಲ್ಲು ಹೊಡೆದವರ ಪತ್ತೆ ಕಾರ್ಯ ನಡೆಯುತ್ತಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...