Sunday, May 17, 2026
Sunday, May 17, 2026

ವಿಳಂಬ ಬೇಡ,ಒಂದು ತಂಡವಾಗಿ ಕೆಲಸಮಾಡಿ ಬೊಮ್ಮಾಯಿ

Date:

ಭ್ರಷ್ಟಾಚಾರ ಸಹಿಸಲ್ಲ. ಯೋಜನೆಗಳ ವಿಳಂಬವನ್ನು ಒಪ್ಪಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆಸಿದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ನೀಡಿದ ಖಡಕ್ ಸೂಚನೆ ನೀಡಿದರು.

ಬಡವರಿಗೆ ಸಹಾಯ ಮಾಡಲು ಏನೇ ನಿರ್ಧಾರ ತೆಗೆದುಕೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ. ಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡಿದರೆ ಹೊಸ ಚೈತನ್ಯ ಮೂಡುತ್ತದೆ. ಅದರಿಂದ ನಿಮಗೂ ತೃಪ್ತಿ ದೊರೆಯುವುದು. ಜನಸಾಮಾನ್ಯರಿಗೆ ಆಡಳಿತದಲ್ಲಿ ಬದಲಾವಣೆ ಆಗುತ್ತಿದೆ ಎಂದರು.

ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಕರೆ ನೀಡಿದರು.

ಸರಳ, ಸುಲಭ ಮತ್ತು ಸ್ವಚ್ಛವಾಗಿದೆ ಎಂಬ ಭಾವನೆ ಬರುವಂತೆ ಆಡಳಿತ ನೀಡಬೇಕು. ನಾವು ಒಂದು ತಂಡವಾಗಿ ಒಟ್ಟಾಗಿ ಕೆಲಸ ಮಾಡಬೇಕು. ನನ್ನ ಕಲ್ಪನೆಯ ನವ ಕರ್ನಾಟಕದ ಸಾಕಾರಕ್ಕೆ ನಿಮ್ಮ ಸಹಕಾರ ಅಗತ್ಯ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಸಿ.ಸಿ.ಪಾಟೀಲ್, ಕೆ.ಸಿ.ನಾರಾಯಣಗೌಡ, ಕೆ.ಗೋಪಾಲಯ್ಯ, ಬಿ.ಸಿ.ನಾಗೇಶ್, ಬಿ.ಸಿ ಪಾಟೀಲ್, ಸುನೀಲ್ ಕುಮಾರ್ , ಪ್ರಭು ಚೌಹಾಣ್, ಉಮೇಶ್ ಕತ್ತಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...

MESCOM ಗಮನಿಸಿ! ಮೇ20 ರಂದು ಕೂಡ್ಲಿ,ಚಿಕ್ಕೂಡ್ಲಿ, ಭದ್ರಾಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

MESCOM ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ...

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...