ರಾಂಚಿ ವಿಮಾನ ನಿಲ್ದಾಣದಲ್ಲಿ ಗಾಬರಿಯ ಸ್ಥಿತಿಯಲ್ಲಿದ್ದ ವಿಶೇಷ ಚೇತನ ಮಗುವನ್ನು ವಿಮಾನ ಹತ್ತುವುದನ್ನು ಇಂಡಿಗೋ ನಿರ್ಬಂಧಿಸಿದೆ. ಈ ಘಟನೆ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ವಿಮಾನಯಾನ ನಿಯಂತ್ರಕ ಡಿಜಿಸಿಎ ತನಿಖೆಯನ್ನು ಪ್ರಾರಂಭಿಸಿದ್ದು ವರದಿಯನ್ನು ಸಲ್ಲಿಸಲು ವಿಮಾನಯಾನ ಸಂಸ್ಥೆಯನ್ನು ಕೇಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಂಚಿ ವಿಮಾನ ನಿಲ್ದಾಣದಲ್ಲಿ ಗಾಬರಿಯ ಸ್ಥಿತಿಯಲ್ಲಿದ್ದ ವಿಶೇಷ ಚೇತನ ಮಗುವನ್ನು ವಿಮಾನ ಹತ್ತುವುದನ್ನು ಇಂಡಿಗೋ ಶನಿವಾರ ನಿರ್ಬಂಧಿಸಿತ್ತು. ಈ ಘಟನೆ ನಂತರ ವಿಮಾನಯಾನ ನಿಯಂತ್ರಕ ಡಿಜಿಸಿಎ ತನಿಖೆಯನ್ನು ಪ್ರಾರಂಭಿಸಿದ್ದು ವರದಿಯನ್ನು ಸಲ್ಲಿಸಲು ವಿಮಾನಯಾನ ಸಂಸ್ಥೆಯನ್ನು ಕೇಳಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮುಖ್ಯಸ್ಥೆ ಪ್ರಿಯಾಂಕ್ ಕಾನೊಂಗ್ ರಾಂಚಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ಸಿಬ್ಬಂದಿ ವಿಶೇಷ ಚೇತನ ಮಗುವಿನೊಂದಿಗೆ ಅನುಚಿತವಾಗಿ ವರ್ತಿಸಿರುವುದು ತಿಳಿದುಬಂದಿದೆ. ಸೂಕ್ತ ಕ್ರಮಕ್ಕಾಗಿ ಗಮನ ಹರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.