Saturday, March 28, 2026
Saturday, March 28, 2026

ದೇಶದ್ರೋಹ ವಿವರಣೆ ಮರು ಪರಿಶೀಲಿಸಲಾಗುತ್ತದೆ-ಕೇಂದ್ರದ ಹೇಳಿಕೆ ಸಲ್ಲಿಕೆ

Date:

ಕೇಂದ್ರ ಸರ್ಕಾರವು ಭಾರತೀಯ ದಂಡ ಸಂಹಿತೆಯಲ್ಲಿರುವ ದೇಶದ್ರೋಹ ವಿವರಿಸುವ ವಿಧಿಯನ್ನು ಮರು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್​ಗೆ ತಿಳಿಸಿದೆ.

ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರವು ಭಾರತೀಯ ದಂಡ ಸಂಹಿತೆಯ (Indian Penal Code – IPC) 124ಎ ವಿಧಿಯನ್ನು ಮರುಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್​ಗೆ ತಿಳಿಸಿದೆ.

ದೇಶದ್ರೋಹದ ಅಪರಾಧವನ್ನು ಐಪಿಸಿ 124ಎ ವಿಧಿಯು ವಿವರಿಸುತ್ತದೆ. ಎಸ್​.ಜಿ.ಒಂಬತ್​ಕೆರೆ vs ಭಾರತ ಸರ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್​ಗೆ ಸಲ್ಲಿಸಿರುವ ಸತ್ಯಾಪನಾ ಪತ್ರದಲ್ಲಿ (ಅಫಿಡವಿಟ್) ಈ ಮಾಹಿತಿ ನೀಡಲಾಗಿದೆ. ವಸಾಹತುಶಾಹಿಯ ಕಾಲದಲ್ಲಿ ರೂಪುಗೊಂಡಿದ್ದ ಕಾನೂನುಗಳ ಹೊರೆಯಿಂದ ದೇಶವನ್ನು ಪಾರು ಮಾಡಬೇಕು ಎಂದು ಕೇಂದ್ರ ಸರ್ಕಾರವು ಶ್ರಮಿಸುತ್ತಿದೆ.

ದೇಶದ್ರೋಹ ಕಾಯ್ದೆಗೆ ಸಂಬಂಧಿಸಿದಂತೆ ಈವರೆಗೆ ವ್ಯಕ್ತವಾಗಿರುವ ದೃಷ್ಟಿಕೋನಗಳ ಬಗ್ಗೆ ಭಾರತ ಸರ್ಕಾರಕ್ಕೆ ಸಂಪೂರ್ಣ ಮಾಹಿತಿಯಿದೆ. ನಾಗರಿಕ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ಬಗ್ಗೆಯೂ ಚರ್ಚೆಗಳು ಆರಂಭವಾಗಿವೆ. ದೇಶದ ಸಾರ್ವಭೌಮತೆ ಮತ್ತು ಏಕತೆಯನ್ನು ಸಂರಕ್ಷಿಸಲು ಕೇಂದ್ರ ಸರ್ಕಾರವು ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿಯೇ ಐಪಿಸಿ ಸೆಕ್ಷನ್ 124ಎ ವಿಧಿಯನ್ನು ಸಂಪೂರ್ಣ ಮರುಪರಿಶೀಲಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಅಫಿಡವಿಟ್ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಹ ಇದೇ ಚಿಂತನೆ ಹಂಚಿಕೊಂಡಿದ್ದಾರೆ. ದೇಶವು ಸುವರ್ಣ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಇರುವಾಗಲೇ ವಸಾಹತುಶಾಹಿ ಹಿಡಿತದಿಂದ ತಪ್ಪಿಸಿಕೊಳ್ಳುವ ಪ್ರಯತ್ನಗಳು ಆರಂಭವಾಗಿವೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ.

ದೇಶದ್ರೋಹ ಕಾನೂನು ಭಾರತ ಸರ್ಕಾರವೇ ಮರುಪರಿಶೀಲನೆಗೆ ಒಳಪಡಿಸಲು ಉದ್ದೇಶಿಸಿರುವುದರಿಂದ ಈ ಕಾನೂನಿನ ಸಾಂವಿಧಾನಿಕ ಮಾನ್ಯತೆಯ ಬಗ್ಗೆ ಪರಿಶೀಲಿಸಲು ಈ ಹಂತದಲ್ಲಿ ಸುಪ್ರೀಂಕೋರ್ಟ್​ ಮುಂದಾಗುವ ಅಗತ್ಯವಿಲ್ಲ ಎಂದು ಭಾರತ ಸರ್ಕಾರವು ಕೋರಿದೆ.

ವಸಾಹತುಶಾಹಿ ಕಾಲದಲ್ಲಿ ಜಾರಿಯಾಗಿದ್ದ ಕಾನೂನಿನ ಔಚಿತ್ಯ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರವು ತನ್ನ ಅಭಿಪ್ರಾಯವನ್ನು ಅಫಿಡವಿಟ್ ಮೂಲಕ ಸ್ಪಷ್ಟಪಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...