Thursday, June 18, 2026
Thursday, June 18, 2026

ಉತ್ತರಾಖಂಡ್ ನಲ್ಲಿ ವರುಣನ ಆರ್ಭಟ

Date:

ಉತ್ತರಾಖಂಡದಲ್ಲಿ ವರುಣನ ಆರ್ಭಟದಿಂದ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 42 ಕ್ಕೆ ಏರಿಕೆಯಾಗಿದೆ. ಉತ್ತರಾಖಂಡ್ ಸರ್ಕಾರವು ಮಳೆಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಮಳೆಯಿಂದಾಗಿ ಉತ್ತರಾಖಂಡ್ ನ ನೈನಿತಾಲ್, ಅಲ್ಮೋರಾ, ಚಂಪಾವತ್, ಪಿಥೋರಘರ್, ಉಧಮ್ ಸಿಂಗ್ ನಗರ, ಲಾಲ್ಕೂವಾನ್ ಪ್ರದೇಶಗಳಲ್ಲಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮೂಲಕ ಈವರೆಗೂ 300ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗಿದೆ. ಉತ್ತರಾಖಂಡ್ ನ ಪ್ರವಾಸಿ ತಾಣವಾದ ನೈನಿತಾಲ್ ಸೇರಿದಂತೆ ಇತರೆ ಭಾಗಗಳಲ್ಲಿ ಭೂಕುಸಿತದಿಂದಾಗಿ ಗಿರಿಧಾಮಕ್ಕೆ ಹೋಗುವ ಮೂರು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕಗಳಲ್ಲಿ ವ್ಯತ್ಯಯ ಉಂಟಾಗಿದೆ.
ವರುಣನ ಅವಾಂತರದಿಂದ ಸೇತುವೆಗಳು ರೈಲ್ವೆ ಹಳಿಗಳು ಹಾನಿಗೊಳಗಾಗಿದ್ದು, ಇದನ್ನು ಸರಿಪಡಿಸಲು 4 ದಿನಗಳು ಬೇಕಾಗಬಹುದು ಎಂದು ರೈಲ್ವೆ ಅಧಿಕಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...