Wednesday, December 17, 2025
Wednesday, December 17, 2025

ಬಿಜೆಪಿ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ಕಾಂಗ್ರೆಸ್ ಜನಧ್ವನಿ ಜಾಥಾ

Date:

ಬಿಜೆಪಿ ಸರಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯವನ್ನು ಖಂಡಿಸಿ ಇಂದು ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಜನಧ್ವನಿ ಜಾಥಾ ಹಾಗೂ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕಾಮಗಾರಿಯಲ್ಲಿ ಶೇ.40 ಕಮಿಷನ್, ಪಿ. ಎಸ್. ಐ ನೇಮಕಾತಿಯಲ್ಲಿ ಕರ್ಮಕಾಂಡ, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್ ಈಶ್ವರಪ್ಪ ರವರನ್ನು ಬಂಧಿಸಿಲ್ಲ. ಪಿಎಸ್ಐ ನೇಮಕಾತಿಯಲ್ಲಿ ಕರ್ಮಕಾಂಡದಲ್ಲಿ ಸಿಐಡಿ ತನಿಖೆಯಲ್ಲಿ ಬಗೆದಷ್ಟೂ ಹಗರಣಗಳು ಹೊರಬರುತ್ತಿವೆ. ಆದರೆ ವಿಧಾನಸೌಧದಲ್ಲಿರುವ ಹಗರಣದ ರೂವಾರಿಗಳನ್ನು ಬಿಟ್ಟು ಕೇವಲ ಮಧ್ಯವರ್ತಿಗಳನ್ನು ಬಂಧಿಸಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಪ್ರಾಮಾಣಿಕವಾಗಿ ಅಭ್ಯರ್ಥಿಗಳಿಗೆ ಹುದ್ದೆಗಳು ಸಿಗದೆ ಉಳ್ಳವರ ಪಾಲಾಗುತ್ತಿದೆ. ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕಲು ಜನರನ್ನು ಬೇರೆ ವಿಷಯಗಳತ್ತ ಸೆಳೆಯಲು ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಅಶೋಕ ವೃತ್ತದಿಂದ ಹೊರಡುವ ಜಾಥಾ ಬಿ.ಎಚ್.ರಸ್ತೆ, ನೆಹರು ರಸ್ತೆ, ಗೋಪಿ ವೃತ್ತದ ಮುಖಾಂತರ ಬಾಲರಾಜ ಅರಸ್ ರಸ್ತೆಯಲ್ಲಿರುವ ಭೋವಿ ಸಮುದಾಯ ಭವನ ತಲುಪಿದ ನಂತರ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...