Friday, February 6, 2026
Friday, February 6, 2026

ಬಿಜೆಪಿ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ಕಾಂಗ್ರೆಸ್ ಜನಧ್ವನಿ ಜಾಥಾ

Date:

ಬಿಜೆಪಿ ಸರಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯವನ್ನು ಖಂಡಿಸಿ ಇಂದು ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಜನಧ್ವನಿ ಜಾಥಾ ಹಾಗೂ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕಾಮಗಾರಿಯಲ್ಲಿ ಶೇ.40 ಕಮಿಷನ್, ಪಿ. ಎಸ್. ಐ ನೇಮಕಾತಿಯಲ್ಲಿ ಕರ್ಮಕಾಂಡ, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್ ಈಶ್ವರಪ್ಪ ರವರನ್ನು ಬಂಧಿಸಿಲ್ಲ. ಪಿಎಸ್ಐ ನೇಮಕಾತಿಯಲ್ಲಿ ಕರ್ಮಕಾಂಡದಲ್ಲಿ ಸಿಐಡಿ ತನಿಖೆಯಲ್ಲಿ ಬಗೆದಷ್ಟೂ ಹಗರಣಗಳು ಹೊರಬರುತ್ತಿವೆ. ಆದರೆ ವಿಧಾನಸೌಧದಲ್ಲಿರುವ ಹಗರಣದ ರೂವಾರಿಗಳನ್ನು ಬಿಟ್ಟು ಕೇವಲ ಮಧ್ಯವರ್ತಿಗಳನ್ನು ಬಂಧಿಸಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಪ್ರಾಮಾಣಿಕವಾಗಿ ಅಭ್ಯರ್ಥಿಗಳಿಗೆ ಹುದ್ದೆಗಳು ಸಿಗದೆ ಉಳ್ಳವರ ಪಾಲಾಗುತ್ತಿದೆ. ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕಲು ಜನರನ್ನು ಬೇರೆ ವಿಷಯಗಳತ್ತ ಸೆಳೆಯಲು ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಅಶೋಕ ವೃತ್ತದಿಂದ ಹೊರಡುವ ಜಾಥಾ ಬಿ.ಎಚ್.ರಸ್ತೆ, ನೆಹರು ರಸ್ತೆ, ಗೋಪಿ ವೃತ್ತದ ಮುಖಾಂತರ ಬಾಲರಾಜ ಅರಸ್ ರಸ್ತೆಯಲ್ಲಿರುವ ಭೋವಿ ಸಮುದಾಯ ಭವನ ತಲುಪಿದ ನಂತರ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...