Wednesday, March 19, 2025
Wednesday, March 19, 2025

ಜಾಗತಿಕ ಹೂಡಿಕೆದಾರರ ಮೇಳ: ವಿವಿಧ ದೇಶಗಳ ರಾಯಭಾರಿಗಳ ಸಭೆಯಲ್ಲಿ ಸಿಎಂ

Date:

ಕರ್ನಾಟಕ ಬಂಡವಾಳ ಹೂಡಿಕೆಗೆ ಸೂಕ್ತ ಸ್ಥಳ. ಈ ಪ್ರಪಂಚದಲ್ಲಿ ನಿಮ್ಮದೇ ಆದ ಪ್ರಪಂಚವನ್ನು ಸೃಷ್ಟಿಸಿ ಎಂದು ವಿವಿಧ ದೇಶಗಳ ರಾಯಭಾರಿಗಳಿಗೆ ಸಿಎಂ ಕರೆ ನೀಡಿದರು.

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ ನಿರ್ಮಿಸಲಾದ ಸೆಟಿಲೈಟ್ ಗಳಲ್ಲಿ ಚಂದ್ರನೆಡೆಗೆ ಪ್ರಯಾಣಿಸಲಾಯಿತು. ಬಯೋ ಟೆಕ್ನಾಲಜಿ, ಫಾರ್ಮಾ ಕೈಗಾರಿಕೆಗಳು, ಐಟಿ ಕ್ಷೇತ್ರ ಗಳು ರಾಜ್ಯದಲ್ಲಿವೆ. ಅಮೆರಿಕದ ನಂತರ ಬೆಂಗಳೂರಿನ ಸಿಲಿಕಾನ್ ವ್ಯಾಲಿ ಖ್ಯಾತಿ ಗಳಿಸಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದ ಪ್ರಯೋಗಾಲಯಗಳು ಕರ್ನಾಟಕದಲ್ಲಿವೆ. ರಾಜ್ಯದಲ್ಲಿ 400 ಸಂಶೋಧನಾ ಕೇಂದ್ರಗಳಿದ್ದು, ಅವುಗಳಲ್ಲಿ 180 ವಿಶ್ವಮಟ್ಟದ ಸಂಶೋಧನಾ ಕೇಂದ್ರಗಳಾಗಿವೆ ಎಂದರು.

ಕರ್ನಾಟಕದ ಅಭಿವೃದ್ಧಿ ವೈಜ್ಞಾನಿಕವಾಗಿ ಆಗಿದೆ. ತಂತ್ರಜ್ಞಾನದ ಬದಲಾವಣೆ ಗಳನ್ನು ಅಳವಡಿಸಿಕೊಂಡಿದೆ. ಆದ್ದರಿಂದ ರಾಜ್ಯದ ಎಲ್ಲ ವಲಯಗಳಲ್ಲಿ ಸಹಜವಾದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣ ಸಾಧ್ಯವಾಗಿದೆ. ಮೆಷಿನ್ ಟೂಲ್ಸ್ ಗಳನ್ನು ಉತ್ಪಾದಿಸುವ ಮೊದಲ ರಾಜ್ಯ. ದೇಶದಲ್ಲಿ ಮೊದಲ ಬಾರಿ ಏರೋಸ್ಪೇಸ್ ಘಟಕವನ್ನು ಸ್ಥಾಪಿಸಿದ ರಾಜ್ಯ ಕರ್ನಾಟಕ ಎಂದರು.

ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ – 2022 – ಜಾಗತಿಕ ಹೂಡಿಕೆದಾರರ ಸಮಾವೇಶದ ಕುರಿತು ವಿವಿಧ ದೇಶಗಳ ರಾಯಭಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ನವದೆಹಲಿಯಲ್ಲಿ ಸಂವಾದ ನಡೆಸಿದರು.

ಜಾಗತೀಕರಣದಿಂದಾಗಿ ವಿಶ್ವ ಬಹಳ ಸಣ್ಣದಾಗಿದೆ. ದಕ್ಷತೆ ಹಾಗೂ ಉತ್ಕೃಷ್ಟತೆ ಆರ್ಥಿಕ ಚಟುವಟಿಕೆಯ ಮೂಲಮಂತ್ರ. ಆದ್ದರಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯಕರ ಸ್ಪರ್ಧೆ ಪ್ರಾರಂಭವಾಗಿದೆ ಎಂದರು.

ಶ್ರೇಷ್ಠರಾದವರು ಮನ್ನಣೆ ಗಳಿಸುತ್ತಾರೆ. ಕರ್ನಾಟಕವನ್ನು ಬಹಳ ಸದೃಢವಾಗಿ, ಸಶಕ್ತವಾಗಿ ವಿಶ್ವಕ್ಕೆ ಪರಿಚಯಿಸಲಾಗುತ್ತದೆ. ರಾಜ್ಯಕ್ಕೆ ಶ್ರೀಮಂತ ಪರಂಪರೆಯೇ ಭದ್ರ ಅಡಿಪಾಯವಾಗಿದೆ. ಮೌಲ್ಯಗಳು, ಪ್ರಾಮಾಣಿಕತೆ ನಮ್ಮ ಪರಂಪರೆಯ ಭಾಗವಾಗಿದೆ. ಅತಿಥಿಗಳೇ ದೇವರು ಎಂಬುದು ಕರ್ನಾಟಕದ ಸಂಸ್ಕೃತಿ. ಶ್ರೀಮಂತ ನೈಸರ್ಗಿಕ ಸಂಪತ್ತು ನಮ್ಮಲ್ಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...