Saturday, May 16, 2026
Saturday, May 16, 2026

ರವೀಂದ್ರನಾಥ್ ಅವರ ರಾಜಿನಾಮೆ ಅಂಗೀಕರಿಸದಂತೆ ಎಂ.ಪಿ.ಕುಮಾರಸ್ವಾಮಿ ಮನವಿ

Date:

ಹಿರಿಯ ಐಪಿಎಸ್ ಅಧಿಕಾರಿ ಡಾ.ಪಿ‌.ರವೀಂದ್ರನಾಥ ಅವರ ರಾಜೀನಾಮೆ ಅಂಗೀಕರಿಸದಂತೆ ಅನುಸೂಚಿತ ಜಾತಿ ಪಂಗಡಗಳ ಸಮಿತಿ ಅಧ್ಯಕ್ಷ ಎಂ.ಪಿ.‌ಕುಮಾರಸ್ವಾಮಿ ನೇತೃತ್ವದ ಸಮಿತಿ ಸದಸ್ಯರು ರಾಜ್ಯ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿದರು.

ಹಿರಿಯ ಐಪಿಎಸ್ ಅಧಿಕಾರಿ ರವೀಂದ್ರ ನಾಥ್ ತಮ್ಮ ರಾಜೀನಾಮೆ ಹಿಂಪಡೆಯಲು ತಮ್ಮ ಅಭ್ಯಂತರವಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ನಿಯೋಗಕ್ಕೆ ಭರವಸೆ ನೀಡಿದರು.

ಸಮಿತಿಯಲ್ಲಿ ಶಾಸಕರಾದ ಎನ್ .
ಮಹೇಶ್, ಪಿ.ರಾಜೀವ್, ಅಬ್ಬಯ್ಯ, ಪ್ರಸಾದ್, ಪ್ರೊ. ಲಿಂಗಣ್ಣ ಇನ್ನಿತರರು ಹಾಜರಿದ್ದರು.
ಸಮಿತಿಯಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಉನ್ನತ ಹುದ್ದೆ ಗಿಟ್ಟಿಸಿಕೊಂಡವವರ ವಿರುದ್ದ ತನಿಖೆಗೆ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದ ಆಧಾರದ ಮೇಲೆ ರವೀಂದ್ರ ನಾಥ್ ಸಂಬಂಧಿಸಿದವರಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಎಂ.ಪಿ. ಕುಮಾರ ಸ್ವಾಮಿ ಹೇಳಿಕೆ ನೀಡಿದ್ದಾರೆ.

ರಾಜೀನಾಮೆ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು,ರೇಣುಕಾಚಾರ್ಯ ಸೇರಿದಂತೆ ಬಿಜೆಪಿ ಮುಖಂಡರಿಗೆ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಪ್ರಕರಣ ಸಂಬಂಧ ನೋಟಿಸ್ ನೀಡಿದ್ದಕ್ಕೆ ರವೀಂದ್ರನಾಥ ವರ್ಗಾವಣೆಯಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಜೀನಾಮೆಗೆ ಸಿದ್ದರಾಮಯ್ಯ ಹಾಗೂ ಬಿಜೆಪಿ ಕಾರಣ ಎಂದು ಎಚ್.ಡಿ.ಕುಮಾರ ಸ್ವಾಮಿ ಆರೋಪಿಸಿದ್ದರು.
ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಸ್ಥಾನಕ್ಕೆ ಡಾ.ಪಿ‌.ರವೀಂದ್ರನಾಥ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದರು.

ನಾಗರಿಕ ಹಕ್ಕು ನಿರ್ದೇಶನಾಲಯದ ನಿರ್ದೇಶಕ ಸ್ಥಾನದಿಂದ ವರ್ಗಾವಣೆ ಮಾಡಿರುವ ಹಿನ್ನೆಲೆಯಲ್ಲಿ ಬೇಸರಗೊಂಡು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...