Wednesday, December 17, 2025
Wednesday, December 17, 2025

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆ : ರಾಜ್ಯದ ಸಾಧನೆ

Date:

ಆತ್ಮ ನಿರ್ಭರ ಭಾರತ ಅಭಿಯಾನದ ಪಿಎಂಎಫ್ಎಂಇ ಯೋಜನೆಯಡಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ದ್ವಿತೀಯ ಸ್ಥಾನಗಳಿಸಿದ್ದು, ಕರ್ನಾಟಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಪ್ರಗತಿಪರ ರೈತರು ಈ ಯೋಜನೆಯ ನೆರವು ಪಡೆದು ಆಹಾರ ಸಂಸ್ಕರಣಾ ಉದ್ಯಮಿಯಾಗಲು ಸುವರ್ಣಾವಕಾಶ ಒದಗಿಸಿದೆ. ರೈತರು, , ಕಿರು ಉದ್ಯಮಿಗಳು , ರೈತ ಉತ್ಪಾದನಾ ಸಂಸ್ಥೆಗಳು , ಸ್ವಸಹಾಯ ಸಂಘಗಳು , ಸಹಕಾರಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಪ್ರಧಾನ ಮಂತ್ರಿಗಳ ಆಶಯಕ್ಕೆ ಮತ್ತಷ್ಟು ಬಲ ತುಂಬಲು ರಾಜ್ಯ ಸರ್ಕಾರವು ಯೋಜನೆಯಡಿಯಲ್ಲಿ ಶೇಕಡ 35 ರಷ್ಟು ಸಾಲ ಸಂಪರ್ಕಿತ ಸಹಾಯಧನಕ್ಕೆ ಹೆಚ್ಚುವರಿಯಾಗಿ ಶೇಕಡ 15 ರಷ್ಟು ಸಹಾಯಧನವನ್ನು ವೈಯಕ್ತಿಕ ಉದ್ದಿಮೆದಾರರಿಗೆ ಹಾಗೂ ರೈತರ ಗುಂಪುಗಳಿಗೆ ನೀಡುತ್ತಿದ್ದು , ಈ ಯೋಜನೆಯನ್ನು ಮತ್ತಷ್ಟು ಆಕರ್ಷಕಗೊಳಿಸಿದೆ .

ಇದರ ಫಲವಾಗಿ ಯೋಜನೆಯ ಅನುಷ್ಠಾನದಲ್ಲಿ ರಾಜ್ಯವು ದೇಶದಲ್ಲಿಯೇ 2 ನೇ ಸ್ಥಾನದಲ್ಲಿದ್ದು , 340 ಉದ್ದಿಮೆಗಳಿಗೆ ಸಾಲ ಮಂಜೂರಾತಿಯಾಗಿದ್ದು , ರೂ .52.62 ಕೋಟಿ ಬಂಡವಾಳವು ಕಿರು ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಹೂಡಿಕೆಯಾಗಿದೆ.

ಬೆಲ್ಲ ತಯಾರಿಕೆ , ತೆಂಗಿನ ಉತ್ಪನ್ನಗಳು , ಸಿರಿಧಾನ್ಯಗಳ ಉತ್ಪನ್ನಗಳು , ಉಪ್ಪಿನಕಾಯಿ , ಮೆಣಸಿನಕಾಯಿ , ಅಡಿಗೆ ಎಣ್ಣೆ , ಬೇಕರಿ ಉತ್ಪನ್ನಗಳು , ಹಣ್ಣು ಮತ್ತು ತರಕಾರಿ ಉತ್ಪನ್ನಗಳು , ಕಾಫಿ , ಮೀನು ಮತ್ತು ಮಾಂಸ ಉತ್ಪನ್ನಗಳು ಸೇರಿದಂತೆ ಇತ್ಯಾದಿ ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲ ಮಂಜೂರಾತಿ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 3871 ಘಟಕಗಳಿಗೆ ಸಾಲ ಮಂಜೂರಾತಿ ನೀಡುವ ಗುರಿ ಹೊಂದಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಆತ್ಮ ನಿರ್ಭರ ಭಾರತ ಅಭಿಯಾನದಡಿಯಲ್ಲಿ ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಫಲವಾಗಿ ದೇಶದಲ್ಲಿರುವ ಸುಮಾರು 2.00 ಲಕ್ಷ ಅಸಂಘಟಿತ ಆಹಾರ ಸಂಸ್ಕರಣಾ ಉದ್ದಿಮೆಗಳ ಕ್ರಮಬದ್ಧಗೊಳಿಸುವ ಸಲುವಾಗಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಇದಾಗಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದೊಂದಿಗೆ 60:40 ಅನುಪಾತದಲ್ಲಿ 2020-21ನೇ ಸಾಲಿನಿಂದ ಅನುಷ್ಠಾನಗೊಳಿಸುತ್ತಿರುವ 5 ವರ್ಷಗಳ ಈ ಯೋಜನೆಯಡಿಯಲ್ಲಿ ರಾಜ್ಯದಲ್ಲಿಯೂ ರೂ .493.55 ಕೋಟಿ ಅನುದಾನದಲ್ಲಿ 11910 ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಹೊಸದಾಗಿ ಪ್ರಾರಂಭಿಸಲು ಅಥವಾ ಹಾಲಿ ಕಾರ್ಯನಿರ್ವಹಿಸುತ್ತಿರುವ ಅಸಂಘಟಿತ ಉದ್ದಿಮೆಗಳನ್ನು ಕ್ರಮಬದ್ಧಗೊಳಿಸಲು ಯೋಜಿಸಲಾಗಿದೆ . ಉದ್ದಿಮೆಗಳಿಗೆ ಸಾಲ ಮಂಜೂರಾತಿ ಮಾಡಲಾಗಿರುತ್ತದೆ.

ಪ್ರಸ್ತುತ ಸಾಲಿನಲ್ಲಿ 3871 ಘಟಕಗಳಿಗೆ ಸಾಲ ಮಂಜೂರಾತಿ ನೀಡುವ ಗುರಿ ಹೊಂದಲಾಗಿದೆ.ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆಗಾಗಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ಸಚಿವರು ಕರೆ ನೀಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...