Tuesday, August 25, 2026
Tuesday, August 25, 2026

ಎಸ್ ಟಿ & ಎಸ್ಸಿ ವರ್ಗಗಳ ಕುಟುಂಬಕ್ಕೆ ಅನುಕಂಪ ಆಧಾರಿತ ನೌಕರಿ

Date:

ದೌರ್ಜನ್ಯದಿಂದ ಮೃತಪಟ್ಟ ಪರಿಶಿಷ್ಟ ಜಾತಿ ಮತ್ತು ಪಂಗಡ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರರ ರೀತಿ ಅನುಕಂಪ ಆಧಾರಿತ ಉದ್ಯೋಗ ನೀಡುವ ಬಗ್ಗೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ರೀತಿ ಎಸ್ಸಿ,ಎಸ್ಟಿ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಸರ್ಕಾರಿ ನೌಕರರು ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಮೃತಪಟ್ಟಾಗ ಅವರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರಿತ ಸರ್ಕಾರಿ ಕೆಲಸ ನೀಡಲಾಗುತ್ತದೆ.

ಅದೇ ಮಾದರಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವ್ಯಕ್ತಿಗಳು ದೌರ್ಜನ್ಯದಿಂದ ಮೃತಪಟ್ಟರೆ ಆ ವ್ಯಕ್ತಿಯ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆ.ಸಿ. ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...