Tuesday, March 24, 2026
Tuesday, March 24, 2026

ಸ್ವರ್ಣವಲ್ಲಿ ಮಠದಲ್ಲಿ ತ್ರಿಧರ್ಮೀಯರ ಸೌಹಾರ್ದ ತೇರು ಹಬ್ಬ

Date:

ಸಾಮರಸ್ಯ, ಸೌಹಾರ್ದತೆಯ ಪ್ರತೀಕ ಎನಿಸಿಕೊಂಡಿರುವ ಶಿರಸಿ ತಾಲೂಕಿನ ಸ್ವರ್ಣವಲ್ಲಿಯ ರಥೋತ್ಸವಕ್ಕೆ ರಥ ಕಟ್ಟುವ ಕೆಲಸ ಆರಂಭವಾಗಿದೆ. ಇಂದು ರಥೋತ್ಸವ ಜರುಗಲಿದ್ದು, ಈ ರಥವನ್ನು ಕಟ್ಟುವ ಕೆಲಸ ಮುಸ್ಲಿಂ ಧರ್ಮಿಯರಿಂದ ಆಗಿರುವುದು ವಿಶೇಷ. ಇಲ್ಲಿ ಮುಸ್ಲಿಮರೇ ರಥ ನಿರ್ಮಾಣ ಮಾಡುವ ಪದ್ಧತಿ ತಲೆ ತಲಾಂತರಗಳಿಂದ ನಡೆದುಕೊಂಡು ಬಂದಿದೆಯಂತೆ.

ಸೌಹಾರ್ದತೆಯ ಪ್ರತೀಕ ಮುಸ್ಲಿಂ ಸಮುದಾಯದವರು ರಚಿಸಿದ ಸ್ವರ್ಣವಲ್ಲಿ ಮಠದ ರಥ
ಸ್ವರ್ಣವಲ್ಲಿಯ ಪೀಠಾಧೀಶ, ಹಸಿರು ಸ್ವಾಮಿಗಳೆಂದು ಹೆಸರುವಾಸಿಯಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮೀಜಿ ಸೌಹಾರ್ದತೆಯ ಪ್ರತೀಕ ಎನಿಸಿಕೊಂಡಿದ್ದಾರೆ.

ಸುಮಾರು 300 ವರ್ಷಗಳಿಂದ ಸ್ವರ್ಣವಲ್ಲಿಯಲ್ಲಿ ಮುಸ್ಲಿಂ ಧರ್ಮಿಯರು ರಥ ಕಟ್ಟುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ‘ನಾವು ಅಲ್ಲಾನನ್ನು ನಂಬುತ್ತೇವೆ. ನರಸಿಂಹ ದೇವರನ್ನೂ ಕೂಡ ನಂಬುತ್ತೇವೆ. ಎಲ್ಲರೂ ಒಂದಾಗಿ ಬಾಳುತ್ತೇವೆ ಎನ್ನುತ್ತಾರೆ ರಥ ಕಟ್ಟುವ ಪ್ರಮುಖ ವ್ಯಕ್ತಿ ಸೋಂದಾದ ಹಸನಸಾಬ ಖಾಜಿ.

ಅಜಾನ್ ಗಲಾಟೆ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ, ಹಿಜಾಬ್​​ ವಿವಾದ ಹೀಗೆ ವಿವಿಧ ರೀತಿಯ ಚರ್ಚೆಗಳು ನಡೆಯುತ್ತಿದ್ದರೂ ಸಹ ಶ್ರೀಗಳು ಮಾತ್ರ ತಮ್ಮ ಹಿಂದಿನ ಪದ್ಧತಿಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಈ ವರ್ಷ ಸಹ ನೂರಾರು ವರ್ಷಗಳಿಂದ ನಡೆದುಕೊಂಡ ಬಂದ ಪದ್ಧತಿಯಂತೆ ಮುಸ್ಲಿಂ ಧರ್ಮಿಯರೇ ರಥವನ್ನು ಕಟ್ಟುತ್ತಾರೆ. ಈ ಸ್ವರ್ಣವಲ್ಲಿ ಮಠದಲ್ಲಿ ಮುಸ್ಲಿಂ ಧರ್ಮದವರು ನೂರಾರು ವರ್ಷಗಳಿಂದ ಈ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ನಿಲ್ಲಿಸಲು ಸಾಧ್ಯವಿಲ್ಲ.
ಎಲ್ಲಾ ಕಡೆ ಸೌಹಾರ್ದಯುತ ವಾತಾವರಣ ಇರಬೇಕು ಎಂದು ಸ್ವರ್ಣವಲ್ಲಿ ಶ್ರೀಗಳು ತಿಳಿಸಿದರು.

ಐದು ಜನ ಸೇರಿ ರಥ ಕಟ್ಟುತ್ತಾರೆ. ರಥವನ್ನು ಹಗ್ಗದಿಂದ ಮಾಡಲಾಗುತ್ತದೆ. ರಥೋತ್ಸವದ ದಿನ ರಥದ ಮೇಲೆ ನಿಯಂತ್ರಣವನ್ನೂ ಸಹ ಮುಸ್ಲಿಂ ಸಮುದಾಯದವರೇ ಮಾಡುತ್ತಾರೆ. ಸ್ವರ್ಣವಲ್ಲಿ ಮಠದಲ್ಲಿ ಮುಸ್ಲಿಂ ಬಾಂಧವರು ರಥ ಕಟ್ಟುವ ಕೆಲಸ ಮಾಡಿದರೆ, ಕ್ರಿಶ್ಚಿಯನ್ ಸಮುದಾಯದವರು ಪಟಾಕಿ ಸಿಡಿಸುವ ಸಂಭ್ರಮದಲ್ಲಿ ತೊಡಗಿಸಿಕೊಳ್ಳುತ್ತಾರೆ.

ಕಾರಣ ಈ ರಥೋತ್ಸವ ಸರ್ವ ಧರ್ಮದವರ ಸೌಹಾರ್ದತೆಯ ಪ್ರತೀಕವಾಗಿದೆ. ಅಲ್ಲದೇ ಇದು ತಾಲೂಕಿನಲ್ಲಿ ನಡೆಯುವ ಮಾಸದ ಕೊನೆಯ ರಥೋತ್ಸವವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...