Saturday, May 16, 2026
Saturday, May 16, 2026

ಬೆಳಿಗ್ಗೆ5 ಕ್ಕೆ ಆಜಾನ್ ನಿಲ್ಲಿಸಲು ಸೂಚಿಸಲಾಗಿದೆ-ಇಮಾಮ್ ಮೌಲಾನ್ ಮಕ್ಸೂದ್

Date:

ರಾಜ್ಯ ಸರ್ಕಾರದಿಂದ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆಯ ಬಗ್ಗೆ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ. ಬೆಳಗಿನ ಜಾವದಲ್ಲಿ ಇಂತಿಷ್ಟೇ ಡೆಸಿಬಲ್ ಶಬ್ದವನ್ನು ಹೊರಸೂಸುವಂತೆ ಧ್ವನಿ ವರ್ಧಕ ಬಳಕೆಗೂ ಖಡಕ್ ಸೂಚನೆ ನೀಡಲಾಗಿದೆ.

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವಂತ ಮುಸ್ಲೀಂ ಮುಖಂಡರು, ಇನ್ನು ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಯ ಆಜಾನ್ ಕೂಗೋದನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.

ಈ ಕುರಿತಂತೆ ಮುಸ್ಲೀಂ ಮುಖಂಡರು ಸಭೆ ನಡೆಸಿದ ಬಳಿಕ, ಮಾಧ್ಯಮ ಮಿತ್ರರಿಗೆ ಮಾಹಿತಿ ನೀಡಿದಂತ ಇಮಾಮ್ ಮೌಲಾನ್ ಮಕ್ಸೂದ್ ಇಮ್ರಾನ್ ರಶಾದಿ ಅವರು, ಇನ್ಮುಂದೆ ಬೆಳಿಗ್ಗೆ 5 ಗಂಟೆಗೆ ಧ್ವನಿ ವರ್ಧಕಗಳಲ್ಲಿ ಆಜಾನ್ ಕೂಗದಂತೆ ಎಲ್ಲಾ ಮಸೀದಿ, ಮುಸ್ಲೀಂ ಮುಖಂಡರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯಾಧ್ಯಂತ ಇರುವ ಮಸೀದಿಗಳಲ್ಲಿ ಬೆಳಿಗ್ಗೆ 5 ಗಂಟೆ, 5.15, 5.30ಕ್ಕೆ ಮೈಕ್ ನಲ್ಲಿ ಆಜಾನ್ ಕೂಗಬಾರದು. ಸರ್ಕಾರ ಧ್ವನಿ ವರ್ಧಕ ಕುರಿತಂತೆ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸಬೇಕು. ಬೆಳಿಗ್ಗೆ 6 ಗಂಟೆಯ ನಂತರ ಪೊಲೀಸರಿಂದ ಅನುಮತಿ ಪಡೆದು, ಆಜಾನ್ ಕೂಗಲು ಸೂಚನೆ ನೀಡಿರೋದಾಗಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...