Sunday, March 1, 2026
Sunday, March 1, 2026

2022 ರ ಬೆಳೆವಿಮೆ 2022ರಲ್ಲೇ ಇತ್ಯರ್ಥ ಪಡಿಸಿ- ಬಿ.ಸಿ.ಪಾಟೀಲ್

Date:

ಹಂಗಾಮುವಾರು ಬೆಳೆ ವಿಮೆ ಶೀಘ್ರ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲರ ಅಧ್ಯಕ್ಷತೆಯಲ್ಲಿ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಇ-ಆಡಳಿತ ಮತ್ತು ಆರ್ಥಿಕ ಹಾಗೂ ಸಾಂಖ್ಯಿಕ ಇಲಾಖಾಧಿಕಾರಿಗಳೊಂದಿಗೆ ತಾಂತ್ರಿಕ ದೋಷಗಳು ಪರಿಹಾರಗಳ ಬಗ್ಗೆ ಚರ್ಚಿಸಲಾಯಿತು. ಬೆಳೆ ವಿಮೆಗೆ ಅನುಕೂಲ ಕಲ್ಪಿಸುವ ನನ್ನ ಬೆಳೆ ನನ್ನ ಹಕ್ಕು ಬೆಳೆ ಸಮೀಕ್ಷೆ ಯೋಜನೆಗೆ ರೈತರು ಹೆಚ್ಚು ಒತ್ತು ನೀಡಿ ರೈತರೇ ಸ್ವತಃ ಮೊಬೈಲ್ ಬೆಳೆ ಸಮೀಕ್ಷೆಯನ್ನು ಯಶಸ್ವಿಯಾಗಿ ಮಾಡುವಂತೆ ನೋಡಿಕೊಳ್ಳಬೇಕು. ಬೆಳೆ ಸಮೀಕ್ಷೆ ಹಂಗಾಮುವಾರು ಸರಿಯಾಗಿ ಅಪ್ಲೋಡ್ ಆಗಬೇಕು
ಬೆಳೆ ಕಟಾವು ಪ್ರಯೋಗಗಳ ದತ್ತಾಂಶ ಹಾಗೂ ಬೆಳೆ‌ ಸಮಿಕ್ಷೆ ದತ್ತಾಂಶವನ್ನು ಅಧಿಕಾರಿಗಳು ತಾಳೆ ಮಾಡಿ ಅಪ್ಲೋಡ್ ಮಾಡಿ ಬೆಳೆ ವಿಮೆಯನ್ನು ಘಟಕವಾರು ಇತ್ಯರ್ಥಪಡಿಸಿಸಬೇಕೆಂದು ತೀರ್ಮಾನಿಸಲಾಯಿತು.ಇದನ್ನು 2022 ರ ಬೆಳೆವಿಮೆಯನ್ನು 2022 ರ ನವೆಂಬರೊಳಗೆ ಇತ್ಯರ್ಥಪಡಿಸಬೇಕು. ಆದ ಬಳಿಕ ರೈತರ‌ಪಹಣಿಯಲ್ಲಿ ತಕ್ಷಣವೇ ತರಲು ಸೂಚಿಸಲಾಯಿತು.

ಸಭೆಯಲ್ಲಿ ಇ-ಆಡಳಿತ ಪ್ರಧಾನ ಕಾರ್ಯದರ್ಶಿ ಪೊನ್ನುರಾಜ್, ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ್,ಕೃಷಿ ನಿರ್ದೇಶಕರು, ಆರ್ಥಿಕ ಮತ್ತು ಸಾಂಖ್ಯಿಕ, ಇ-ಆಡಳಿತ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikshana Ratna Awards ಶಿಕ್ಷಣ ಸಂಯೋಜಕ ಬಿ.ನಾಗರಾಜ್ ಗೆ “ಶಿಕ್ಷಣ ರತ್ನ” ಪ್ರಶಸ್ತಿ.

Shikshana Ratna Awards ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕಳೆದ ನಾಲ್ಕು...

Shimoga News ಯುವಜನತೆ ಹಾದ ತಪ್ಪಿದಷ್ಟೂ ಕಂಪನಿಗಳಿಗೆ ಲಾಭ- ಎ.ಹೆಚ್.ಸಾಗರ್.

Shimoga News ನೈಜ ಪ್ರಪಂಚವನ್ನು ಕಾಣದೆ ಮೊಬೈಲ್ ಮೂಲಕವೇ ಜಗತ್ತನ್ನು ಅರ್ಥ...