ಇಂದು ಬಂಡಿಪೊರಾದ ಬ್ರಾರ್ ಅರಗಮ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ರಾಹುಲ್ ಭಟ್ನನ್ನು ಕೊಂದ ಇಬ್ಬರು ಉಗ್ರರು ಸೇರಿದಂತೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ನಲ್ಲಿ ಗುರುವಾರ ನಡೆದ ಉಗ್ರರ ದಾಳಿಯಲ್ಲಿ ಕಾಶ್ಮೀರಿ ಪಂಡಿತ್ ಸಮುದಾಯದ ರಾಹುಲ್ ಭಟ್ನನ್ನು ಹತ್ಯೆ ಮಾಡಲಾಗಿತ್ತು.
ಇಂದು ಬಂಡಿಪೊರಾದ ಬ್ರಾರ್ ಅರಗಮ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ರಾಹುಲ್ ಭಟ್ನನ್ನು ಕೊಂದ ಇಬ್ಬರು ಉಗ್ರರು ಸೇರಿದಂತೆ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಮೂವರಲ್ಲಿ ಇಬ್ಬರು ಗುರುವಾರ ಕಾಶ್ಮೀರಿ ಪಂಡಿತ್ ಸಮುದಾಯದ ರಾಹುಲ್ ಭಟ್ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಕಾಶ್ಮೀರದ ಪೊಲೀಸರು ಶುಕ್ರವಾರ ಮಧ್ಯಾಹ್ನ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಬಂಡಿಪೊರಾದ ಬ್ರಾರ್ (ಅರಗಮ್) ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ.
ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯದಲ್ಲಿವೆ. ಹೆಚ್ಚಿನ ವಿವರಗಳನ್ನು ತಿಳಿಸಲಾಗುವುದು.’ ಎಂದು ಟ್ವೀಟ್ ಮಾಡಿದ್ದಾರೆ.
ಕಾಶ್ಮೀರದ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಪ್ರಕಾರ, ತಪ್ಪಿಸಿಕೊಂಡ ಇಬ್ಬರು ಶುಕ್ರವಾರದ ಎನ್ಕೌಂಟರ್ನಲ್ಲಿ ಸಿಕ್ಕಿಬಿದ್ದಿದ್ದರು.
ಜಮ್ಮು ಮತ್ತು ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಸಲಿಂದರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು. ಇನ್ನಿಬ್ಬರು ಪಾರಾಗಿದ್ದಾರೆ.