Thursday, April 16, 2026
Thursday, April 16, 2026

ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳು:ರೈತರಿಗೆ ಸಂಕಷ್ಟ

Date:

ರೈತರ ಕಬ್ಬಿನ ಬಾಕಿ ಬಿಲ್‌ ಪಾವತಿಗೆ ಸರ್ಕಾರ ಸೂಚನೆ ಕೊಟ್ಟರೂ ಸಹ ಸಕ್ಕರೆ ಕಾರ್ಖಾನೆಗಳ ಮಾಲೀಕರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ.

ಕಬ್ಬು ಪೂರೈಸಿದ 15 ದಿನಗಳಲ್ಲಿ ರೈತರಿಗೆ ಕಬ್ಬಿನ ಹಣ ಪಾವತಿಸಬೇಕೆಂಬ ನಿಯಮಕ್ಕೆ ಬೆಲೆಯೇ ಕೊಡುತ್ತಿಲ್ಲ.

ಈ ನಿಯಮಗಳು ಕಾಗದಕ್ಕೆ ಮಾತ್ರ ಸೀಮಿತ. ಕಬ್ಬು ಬೆಳೆಗಾರರಿಗೆ ಕೊಡಬೇಕಾದ ಹಣ ಕೊಡದೇ ಸಕ್ಕರೆ ಕಾರ್ಖಾನೆಗಳು ರೈತರ ಗಾಯದ ಮೇಲೆ ಬರೆ ಎಳೆದಿವೆ.

ಬೆಳ​ಗಾವಿ ಜಿಲ್ಲೆಯ ಒಟ್ಟು 21 ಸಕ್ಕರೆ ಕಾರ್ಖಾನೆಗಳು 2021-22ನೇ ಸಾಲಿನಲ್ಲಿ ರೈತರ ಕಬ್ಬಿನ ಬಾಕಿ ಉಳಿಸಿಕೊಂಡಿರುವ ಮೊತ್ತ ಬರೋಬ್ಬರಿ 889.61 ಕೋಟಿ ಎಂಬು​ವುದು ಈಗ ಇದು ಬಹಿರಂಗ​ಗೊಂಡಿದೆ. ಕೇವಲ ಒಂದೇ ಜಿಲ್ಲೆ​ಯಲ್ಲಿ ಇಷ್ಟೊಂದು ಮೊತ್ತ ಇರಬೇಕಾದರೆ, ಬೇರೆ ಜಿಲ್ಲೆಗಳಲ್ಲಿ ಇನ್ನೆಷ್ಟು ಇರಬಹುದು.

ಕಳೆದ ಎರಡು ವರ್ಷಗಳಿಂದ ರೈತರು ಕೊರೋನಾ ಸಂಕಷ್ಟದಿಂದ ನಲುಗಿಹೋಗಿದ್ದಾರೆ. ಈಗ ಕಬ್ಬಿನ ಬಾಕಿ ಬಿಲ್‌ ಬಾರದಿರುವುದು ಮತ್ತಷ್ಟು ಸಂಕಷ್ಟಕ್ಕೆ ತಳ್ಳುವಂತಾಗಿದೆ. ಒಂದೆಡೆ ಕಬ್ಬಿನ ಬಾಕಿ ಬಿಲ್‌ ನೀಡುವಂತೆ ರೈತರ ಹೋರಾಟ ಇನ್ನೂ ನಿಂತಿಲ್ಲ. ಇನ್ನೊಂದೆಡೆ ಸಕ್ಕರೆ ಕಾರ್ಖಾನೆಗಳ ಮಾಲೀಕರು ಬಾಕಿ ಹಣ ಪಾವತಿಸದೇ ರೈತರನ್ನು ಸತಾಯಿಸುವುದು ತಪ್ಪಿಲ್ಲ.

ರೈತರು ಸಾಲ ಮಾಡಿ ಕಬ್ಬು ಬೆಳೆದು, ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡಿದ ರೈತರು ಈಗ ಸಂಕಷ್ಟದಲ್ಲಿದ್ದಾರೆ. ಕಬ್ಬಿನ ಬಾಕಿ ಹಣ ಪಾವತಿಸುವಂತೆ ಸಚಿವರು ಆದೇಶ ಮಾಡಿದ್ದರೂ, ಆ ಆದೇಶಕ್ಕೆ ಕ್ಯಾರೇ ಅನ್ನುತ್ತಿಲ್ಲ. ಸಕ್ಕರೆ ಕಾರ್ಖಾನೆಗಳು ತಮ್ಮ ಹಠಮಾರಿತನ ನೀತಿಯನ್ನು ಮುಂದುವರಿಸಿವೆ. ರೈತರು ಸಂಕಷ್ಟದಲ್ಲಿದ್ದರೂ ಕಾರ್ಖಾನೆಗಳು ಬಾಕಿ ಹಣ ನೀಡುತ್ತಿಲ್ಲ. ಕಬ್ಬಿನ ಬಾಕಿ ಬಿಲ್‌ ಪಾವತಿಗೆ ರೈತರು ಗಡುವು ಕೊಟ್ಟರೂ ಯಾವುದೇ ಪ್ರಯೋಜನವಾಗುತ್ತಿಲ್ಲ.

ಸಹಕಾರ ಕ್ಷೇತ್ರಗಳಿಂದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದಾರೆ. ಸಾಲ ಪಡೆದಿದ್ದರೂ ರೈತರ ಕಬ್ಬಿನ ಬಾಕಿ ಹಣ ಪಾವತಿಸುತ್ತಿಲ್ಲ. ತಾವು ಸಾಲ ಪಡೆದುಕೊಂಡ ಬ್ಯಾಂಕಿಗೂ ಸಾಲ ಮತ್ತು ಬಡ್ಡಿಯನ್ನೂ ಕೆಲ​ವನ್ನು ಹೊರ​ತು​ಪ​ಡಿಸಿ ಮತ್ತೆ ಕಲವು ಕಾರ್ಖಾ​ನೆ​ಗಳು ಪಾವ​ತಿಗೇ ಮುಂದಾ​ಗ​ದಿ​ರು​ವುದು ಕಂಡು​ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Sports and Cultural Club ಬಾಕ್ಸ್ ಕ್ರಿಕೆಟ್ ಟೂರ್ನಿ: ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಚಾಂಪಿಯನ್ಸ್

JCI Sports and Cultural Club ಜೆಸಿಐ ಸ್ಪೋರ್ಟ್ಸ್ ಮತ್ತು ಕಲ್ಚರಲ್...

B.Y. Raghavendra ಭಾರತದಲ್ಲಿ ಮಹಿಳಾ ಮೀಸಲಾತಿಯನ್ನ ಐತಿಹಾಸಿಕವಾಗಿ ಜಾರಿಗೆ ತರಲಾಗುತ್ತಿದೆ- ಬಿ.ವೈ.ರಾಘವೇಂದ್ರ

B.Y. Raghavendra ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಬುತ್ವವಾದ ಭಾರತದಲ್ಲಿ ಐತಿಹಾಸಿಕ ಮಹಿಳಾ...

B.Y. Raghavendra ಶಿವಮೊಗ್ಗದ ಸಂಚಾರ ವ್ಯವಸ್ಥೆ ಸುಧಾರಣೆ ಮಾಸ್ಟರ್ ಪ್ಲಾನ್: ಪ್ರಗತಿ ಪರಿಶೀಲನ ಸಭೆ

B.Y. Raghavendra ಶಿವಮೊಗ್ಗ ನಗರದ ಸಂಚಾರ ದಟ್ಟಣೆ ನಿವಾರಣೆ ಹಾಗೂ ರಸ್ತೆಗಳ...