Thursday, March 19, 2026
Thursday, March 19, 2026

ನಿರ್ಧಿಷ್ಟ ಮಕ್ಕಳಿಗೆ ವಸತಿ ಶಾಲೆಗೆ ನೇರ ಪ್ರವೇಶ

Date:

ರಾಜ್ಯದಲ್ಲಿ ಕೋವಿಡ್-19 ರ ಸೊಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ಸರ್ಕಾರಿ ವಸತಿ ಶಾಲೆಗಳಿಗೆ ನೇರವಾಗಿ ದಾಖಲಿಸಲು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ನಿರ್ಧರಿಸಿದೆ.
ಮೊರಾರ್ಜಿ ದೇಸಾಯಿ , ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ, ಏಕಲವ್ಯ ಮಾದರಿ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳು 5 ನೇ ತರಗತಿಯಲ್ಲಿ ಪ್ರವೇಶ ಪರೀಕ್ಷೆ ಬರೆಯುವ ಮೂಲಕ ವಸತಿ ಶಾಲೆಗಳಿಗೆ ಆಯ್ಕೆಯಾಗುತ್ತಾರೆ.
ಆದರೆ, ಕೋವಿಡ್ – 19ರ ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಪೋಷಕರ ಪರಿಶಿಷ್ಟ ಜಾತಿ , ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಮಕ್ಕಳು ರಾಜ್ಯದ ಯಾವುದೇ ವಸತಿ ಶಾಲೆಗಳಲ್ಲಿ ಖಾಲಿ ಇರುವ ಸ್ಥಾನಕ್ಕೆ ನೇರವಾಗಿ ಪ್ರವೇಶ ಕಲ್ಪಿಸಲು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ತೀರ್ಮಾನಿಸಿದೆ.
ರಾಜ್ಯದಲ್ಲಿ ಒಟ್ಟು 826 ವಸತಿ ಶಾಲೆಗಳಿವೆ‌. ಅದರಲ್ಲಿ 40,540 ಸೀಟುಗಳಿವೆ. ಇಲ್ಲಿ 6 ರಿಂದ 12 ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಬಹುದಾಗಿದೆ.
ಸರ್ಕಾರಿ, ಅನುದಾನಿತ ಹಾಗೂ ನೋಂದಾಯಿತ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಂದ ಮಕ್ಕಳು ಪ್ರವೇಶ ಪರೀಕ್ಷೆಯೊಂದಿಗೆ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ಯಾವುದೇ ವಸತಿ ಶಾಲೆಗೆ ಪ್ರವೇಶ ಪರೀಕ್ಷೆಯೊಂದಿಗೆ 6 ನೇ ತರಗತಿಗೆ ದಾಖಲಾಗಬಹುದು.
11ನೇ ತರಗತಿಗೆ ಪ್ರವೇಶ ಪರೀಕ್ಷೆ ಇಲ್ಲದೇ ಹಾಗೂ 10 ನೇ ತರಗತಿಗೆ ಮೆರಿಟ್ ಆಧಾರದ ಮೇಲೆ ದಾಖಲಿಸಬಹುದಾಗಿದೆ. ಕ್ರೈಸ್ ತೀರ್ಮಾನದ ಕುರಿತಂತೆ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಜಿಲ್ಲಾಧಿಕಾರಿಗಳು , ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಮಾಹಿತಿ ರವಾನಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...