Tuesday, March 24, 2026
Tuesday, March 24, 2026

ರಸ್ತೆ ಅಪಘಾತ ಸಂತ್ರಸ್ತರ ರಕ್ಷಣೆಗೆ ಪ್ರೇರಕವಾಗಿ ಜೀವರಕ್ಷಕ ಸಮ್ಮಾನ

Date:

ರಸ್ತೆ ಅಪಘಾತಕ್ಕೊಳಗಾದ ಸಂತ್ರಸ್ತರನ್ನ ರಕ್ಷಿಸಲು ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆಯಿಟ್ಟಿದ್ದು, ಜೀವ ರಕ್ಷಕರಿಗೆ ನಗದು ಹಣದ ಜೊತೆಗೆ ಪ್ರಮಾಣಪತ್ರ ನೀಡಲು ಮುಂದಾಗಿದೆ. ಅದ್ರಂತೆ, ರಸ್ತೆ ಅಪಘಾತಕ್ಕೊಳಗಾದ ವ್ಯಕ್ತಿಗಳನ್ನ ಆಸ್ಪತ್ರೆಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಮಟ್ಟದಲ್ಲಿ ಜೀವ ರಕ್ಷಕರಿಗೆ ನಗದು ಪ್ರಶಸ್ತಿ ನೀಡಲು ಸರ್ಕಾರ ಯೋಜಿಸಿದೆ.

ಆಸ್ಪತ್ರೆಗೆ ಸಾಗಿಸಲು ಪ್ರೇರೆಪಿಸುವ ಉದ್ದೇಶದಿಂದ ನಗದು ಪ್ರಶಸ್ತಿ ನೀಡಲು ಸರ್ಕಾರ ಮುಂದಾಗಿದ್ದು, ಜೀವರಕ್ಷಕ ಆಯ್ಕೆಗಾಗಿ ರಾಜ್ಯಮಟ್ಟದಲ್ಲಿ ಪರಿಶೀಲನಾ ಸಮಿತಿ ರಚನೆ ಮಾಡಲಾಗುವುದು. ಈ ಮೌಲ್ಯಮಾಪನ ಸಮಿತಿಗಳನ್ನ ಜಿಲ್ಲಾಮಟ್ಟಗಳಲ್ಲಿ ರಚನೆಯಾಗಲಿದ್ದು, ಈ ಜಿಲ್ಲಾ ಮೌಲ್ಯಮಾಪನ ಸಮಿತಿಗಳನ್ನ ಡಿಸಿಗಳ ಅಧ್ಯಕ್ಷತೆಯಲ್ಲಿ ರಚನೆ ಮಾಡಲಾಗುವುದು.

ಅಂದ್ಹಾಗೆ, ಜೀವರಕ್ಷಕರಿಗೆ 5000 ರೂಪಾಯಿ ನಗದು ಪ್ರಶಸ್ತಿ ಮತ್ತು ಪ್ರಮಾಣಪತ್ರ ನೀಡಿಕೆಗಾಗಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಮಾರ್ಗಸೂಚಿ ಪ್ರಕಟಿಸಿದೆ. ಅದರಂತೆ, ಮಾರ್ಗಸೂಚಿಯಂತೆ ರಾಜ್ಯ ಮಟ್ಟದಲ್ಲಿ ಪರಿಶೀಲನಾ ಸಮಿತಿ ರಚನೆ ಮಾಡಲಾಗುತ್ತದೆ.

ಈ ಯೋಜನೆ 2026 ಮಾರ್ಚ್‌ 31ರವರೆಗೂ ಜಾರಿಯಲ್ಲಿರಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...