ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಈಗಾಗಲೇ 37 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಕುರಿತು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಂತ ಕಮಲ್ ಪಂತ್ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಇನ್ನು ಲಾ ಅಂಡ್ ಆರ್ಡರ್ ನ ಹೆಚ್ಚುವರಿ ಡಿಜಿಪಿಯಾಗಿದ್ದಂತ ಸಿ ಹೆಚ್ ಪ್ರತಾಪ್ ರೆಡ್ಡಿಯವರನ್ನು ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಕ್ರೈಂ ವಿಭಾಗದ ಡಿಸಿಪಿಯಾಗಿದ್ದಂತ ಎಂ ಎನ್ ಅನುಚೇತನ್ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಸಿಐಡಿಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಈ ಸ್ಥಾನದಲ್ಲಿದ್ದಂತ ಟಿ ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಕೆ ಎಸ್ ಆರ್ ಪಿಯ ಹೆಚ್ಚುವರಿ ಡಿಜಿಪಿಯಾಗಿದ್ದಂತ ಅಲೋಕ್ ಕುಮಾರ್ ಅವರನ್ನು, ಲಾ ಅಡ್ ಆರ್ಡರ್ ನ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕ್ರೈಂ ಮತ್ತು ಟೆಕ್ನಿಕಲ್ ಸರ್ವಿಸ್ ನ ಎಡಿಜಿಪಿಯಾಗಿದ್ದಂತ ಆರ್ ಹಿತೇಂದ್ರ ಅವರನ್ನು ಕೆ ಎಸ್ ಆರ್ ಪಿಯ ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ.