Sunday, May 24, 2026
Sunday, May 24, 2026

ನ್ಯಾಯಾಲಯದ ಆದೇಶವನ್ನ ನಾವೆಲ್ಲ ಪಾಲಿಸಬೇಕು- ಜ್ಞಾನೇಂದ್ರ

Date:

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಚ್ಚರಿಗೆ ನೀಡಿದ್ದಾರೆ.

ಜಾಮಿಯಾ ಮಸೀದಿ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. 1784ರಲ್ಲಿ ದೇವಸ್ಥಾನವನ್ನು ಒಡೆದು ಟಿಪ್ಪು ಸುಲ್ತಾನ್ ಈ ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಹೀಗಾಗಿ ಈ ಮಸೀದಿಯ ಜಾಗದಲ್ಲಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಬೇಕೆಂದು ವೇದಿಕೆಯು ಆಗ್ರಹಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಜಾಮಿಯ ಮಸೀದಿ ಆಂಜನೇಯಸ್ವಾಮಿ ದೇವಾಲಯವಾಗಿದ್ದು, ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ‘ನರೇಂದ್ರ ಮೋದಿ ವಿಚಾರ ಮಂಚ್’ ವೇದಿಕೆಯು ಹೇಳಿಕೆ ನೀಡಿದ್ದು, ಈ ಕುರಿತು ಹೋರಾಟ ನಡೆಸಲು ನರೇಂದ್ರ ಮೋದಿ ವಿಚಾರ ಮಂಚ್ ಸಿದ್ದತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಹೋರಾಟದ ಸಿದ್ಧತೆಯಂತೆ ಈಗಾಗಲೇ ಸಂಘಟನೆಯು ಮಸೀದಿಯ ಜಾಗದಲ್ಲಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿಯನ್ನೂ ಸಲ್ಲಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು,ಎಲ್ಲರೂ ಶಾಂತಿಯುತವಾಗಿ ಜೀವನ ನಡೆಸಬೇಕು. ನ್ಯಾಯಾಲಯದ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ತಿಳಿಸಿದರು.

ಈ ಬೆಳವಣಿಗೆಯು ನನ್ನ ಗಮನಕ್ಕೆ ಬಂದಿದೆ. ವಿವಾದವನ್ನು ತಾವಾಗಿಯೇ ಪರಿಹರಿಸಲು ಕಾನೂನು ಸುವ್ಯವಸ್ಥೆಗೆ ಸವಾಲೆಸೆಯುವ ಪ್ರಯತ್ನಗಳನ್ನು ಯಾರೂ ಮಾಡಬಾರದು. ಯಾರಾದರೂ ಕಾನೂನು ಸುವ್ಯವಸ್ಥೆಗೆ ಸವಾಲೆಸೆದಿದ್ದೇ ಆದರೆ, ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...