Friday, February 6, 2026
Friday, February 6, 2026

ಆಕ್ರಮಣಕಾರಿ ಬ್ಯಾಟಿಂಗ್ ನಿಂದ ಲಖನೌ ತಂಡ ಪ್ಲೇ ಆಫ್ ಪಟ್ಟಿಗೆ

Date:

ಲಖನೌ ಸೂಪರ್​ ಜೈಂಟ್ಸ್​ ತಂಡವು ಶ್ರೇಯಸ್​ ಅಯ್ಯರ್​ ನೇತೃತ್ವದ ಕೆಕೆಆರ್​ ವಿರುದ್ಧ ಕೇವಲ 2ರನ್​ಗಳ ಅಂತರದ ರೋಚಕ ಗೆಲುವು ದಾಖಲಿಸಿದೆ.
ಇದರೊಂದಿಗೆ ಜೈಂಟ್ಸ್​ ಪ್ಲೇ-ಆಫ್​ ಪ್ರವೇಶ ಪಡೆದುಕೊಂಡಿದೆ.

ಈ ಮೂಲಕ ಗುಜರಾತ್ ಬಳಿಕ ಎರಡನೇ ತಂಡವಾಗಿ ಮುಂದಿನ ಹಂತಕ್ಕೆ ಲಗ್ಗೆ ಹಾಕಿರುವ 2ನೇ ತಂಡವಾಗಿ ಹೊರಹೊಮ್ಮಿದೆ.

ಇನ್ನೊಂದೆಡೆ ಎರಡು ಬಾರಿಯ ಚಾಂಪಿಯನ್ ಕೆಕೆಆರ್ ಸೋಲಿನೊಂದಿಗೆ​ ಅಭಿಯಾನ ಮುಗಿಸಿದೆ.
ವಿಕೆಟ್ ಕೀಪರ್ ಬ್ಯಾಟರ್ ಡಿಕಾಕ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ, ಐಪಿಎಲ್​​ನಲ್ಲಿ ಎರಡನೇ ಶತಕ( ಅಜೇಯ140) ಸಿಡಿಸಿ ಮಿಂಚಿದರು.
ಕ್ಯಾಪ್ಟನ್ ರಾಹುಲ್ 68​​ ರನ್​ಗಳಿಸಿದರು. ಡಿಕಾಕ್​ ತಾವು ಎದುರಿಸಿದ 70 ಎಸೆತಗಳಲ್ಲಿ 10 ಸಿಕ್ಸರ್, 10 ಬೌಂಡರಿ ಸೇರಿ ಅಜೇಯ 140 ರನ್​​ಗಳಿಕೆ ಮಾಡಿದರು. ಕೋಲ್ಕತ್ತಾ ತಂಡದ ಯಾವೊಬ್ಬ ಪ್ಲೇಯರ್ ಕೂಡ ಒಂದೇ ಒಂದು ವಿಕೆಟ್​ ಸಹ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಲಿಲ್ಲ.

ಟಿಮ್ ಸೌಥಿ ತಾವು ಎಸೆದ 4 ಓವರ್​​ಗಳಲ್ಲಿ 57ರನ್​​ ನೀಡಿದರು.
ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಕಣಕ್ಕಿಳಿದ ಕ್ಯಾಪ್ಟನ್ ರಾಹುಲ್​ ಹಾಗೂ ಡಿಕಾಕ್​ ಉತ್ತಮ ಜೊತೆಯಾಟವಾಡಿದರು.

ವಿಕೆಟ್​ ಪತನಗೊಳ್ಳದಂತೆ ನಿಗಾ ವಹಿಸಿದ ಈ ಜೋಡಿ ಎದುರಾಳಿ ಬೌಲರ್​​ಗಳನ್ನ ದಂಡಿಸಿದರು.

ಕೊನೆ ಓವರ್​​ವರೆಗೆ ಬ್ಯಾಟ್ ಬೀಸಿದ ಈ ಜೋಡಿ 20 ಓವರ್​ಗಳಲ್ಲಿ 210ರನ್​​ಗಳಿಕೆ ಮಾಡಿದ್ದು, ಎದುರಾಳಿ ತಂಡದ ಮುಂದೆ ಬೃಹತ್ ಟಾರ್ಗೆಟ್​ ನೀಡಿತು.

211ರನ್​ಗಳ ಬೃಹತ್​ ಗುರಿ ಬೆನ್ನತ್ತಿದ ಕೆಕೆಆರ್​, ಆರಂಭಿಕ ಆಘಾತದ ಹೊರತಾಗಿ ನಾಯಕ ಶ್ರೇಯಸ್​ ಅಯ್ಯರ್(50), ರಿಂಕು ಸಿಂಗ್ ಸ್ಫೋಟಕ(40) ಹಾಗೂ ನರೈನ್​ ಅಜೇಯ(21) ಸಹಾಯದಿಂದ ನಿಗದಿತ 20 ಓವರ್​ಗಳಲ್ಲಿ 8ವಿಕೆಟ್​ನಷ್ಟಕ್ಕೆ 208ರನ್​ಗಳಿಕೆ ಮಾಡಿ, 2ರನ್​ಗಳ ರೋಚಕ ಸೋಲು ಕಂಡಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...