Thursday, February 5, 2026
Thursday, February 5, 2026

ಜಿಲ್ಲಾಧಿಕಾರಿಗಳಿಂದ ಶಿವಮೊಗ್ಗ ನಗರದ ಮಳೆಹಾನಿ ಪ್ರದೇಶಗಳಿಗೆ ಭೇಟಿ

Date:

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ತಹಶೀಲ್ದಾರ್, ಕರ್ನಾಟಕ ನೀರಾವರಿ ನಿಗಮ ಹಾಗೂ ಇತರೆ ಅಧಿಕಾರಿಗಳೊಂದಿಗೆ ಶಿವಮೊಗ್ಗ ನಗರದಲ್ಲಿ ಮಳೆಯಿಂದ ಹಾನಿಗೀಡಾದ ಕೆಲವು ಪ್ರದೇಶಗಳಿಗೆ ತೆರಳಿ, ಪರಿಹಾರ ಕಾರ್ಯಗಳ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಗುರುಪುರ ಸಮೀಪದ ಶಾಂತಮ್ಮ ಲೇಔಟ್ ಮತ್ತು ಹೊಳೆಹೊನ್ನೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ರಿಂಗ್‍ರಸ್ತೆ ಸಮೀಪದ ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿರುವ ಕಾರಣ ಜಿಲ್ಲಾಧಿಕಾರಿಗಳು ನೀರಿನ ಒಳ ಹರಿವಿನ ಪರಿಶೀಲನೆಯನ್ನು ಕೈಗೊಂಡು, ಇಸ್ಲಾಪುರದ ಚಾನಲ್‍ನಲ್ಲಿನ ನೀರಿನ ಹರಿವು ಮತ್ತು ಹರಿಗೆ ಕೆರೆಯ ಕೋಡಿಗೆ ಸ್ವತಃ ಭೇಟಿ ನೀಡಿದ್ದಾರೆ. ಭೇಟಿ ನೀಡಿದ ಸಂದರ್ಭದಲ್ಲಿ ಚಾನಲ್‍ನಲ್ಲಿ ಕಸ ತುಂಬಿರುವುದನ್ನು ಪರಿಶೀಲಿಸಿ ಕಸವನ್ನು ತೆಗೆಸುವಂತೆ ಕೆಎನ್‍ಎನ್‍ಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸ್ಥಳದಲ್ಲಿ ಜೆಸಿಬಿ ಮೂಲಕ ಕಸ ತೆಗೆಯುವ ಕೆಲಸವನ್ನು ಪರಿಶೀಲಿಸಿದ್ದಾರೆ. ಸ್ಥಳೀಯರೊಂದಿಗೆ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ.

ಈ ಸಂದರ್ಭದಲ್ಲಿ ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ನಾಗರಾಜ್, ಕೆಎನ್‍ಎನ್‍ಎಲ್ ಅಧಿಕಾರಿಗಳು ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...