Sunday, March 29, 2026
Sunday, March 29, 2026

ಕಬ್ಬಿಣ ಅದಿರು ರಫ್ತಿಗೆ ಸುಪ್ರೀಂ ಅನುಮತಿ: ಗರಿಗೆದರಿದ ಗಣಿಗಳು

Date:

ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿನ ಗಣಿಗಳಿಂದ ಹೊರತೆಗೆಯಲಾದ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಕೋರ್ಟ್ ನಿನ್ನೆ ಶುಕ್ರವಾರ ಅನುಮತಿ ನೀಡಿದೆ.

ಅದಿರು ರಫ್ತಿಗೆ ಅವಕಾಶ ಕೋರಿ ಗಣಿ ಮಾಲೀಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠವು, ಅದಿರು ರಫ್ತಿಗೆ 11 ವರ್ಷಗಳ ನಂತರ ಹಸಿರು ನಿಶಾನೆ ನೀಡಿದೆ.

ಇ ಹರಾಜು ಮೂಲಕ ಅದಿರು ಖರೀದಿಸುವುದಕ್ಕೆ ಸಾಕಷ್ಟು ಸಮಸ್ಯೆಗಳು ಇರುವುದರಿಂದ ಮಾರಾಟ ಪ್ರಕ್ರಿಯೆ ನೀರಸವಾಗಿತ್ತು ಎಂದು ಹೇಳಿರುವ ಪೀಠ, ಇ ಹರಾಜಿನ ಮೂಲಕ ರಾಜ್ಯದಲ್ಲಿ ಅದಿರು ಮಾರಾಟಕ್ಕೆ ಇದ್ದ ಕೆಲವು ಕಠಿಣ ನಿಯಮಗಳನ್ನು ಸಡಿಲಗೊಳಿಸಿ ಆದೇಶವನ್ನು ನೀಡಿದೆ.

ಇದರಿಂದಾಗಿ ಉಕ್ಕು ಉತ್ಪಾದನಾ ಘಟಕಗಳು ಸ್ಥಳೀಯವಾಗಿ ಅದಿರು ಖರೀದಿಸಲು ಇದ್ದ ಕಠಿಣ ನಿಯಮಗಳಿಂದ ರಿಯಾಯಿತಿ ದೊರೆತಂತಾಗಿದೆ.

ರಾಜ್ಯದ ಗಣಿಗಳಿಂದ ಹೊರ ತೆಗೆಯಲಾದ ಕಬ್ಬಿಣದ ಅದಿರನ್ನು ರಫ್ತು ಮಾಡುವ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಸುಪ್ರೀಂ ಕೋರ್ಟ್‌ ಇತ್ತೀಚೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಸೂಚಿಸಿತ್ತು.

ಇದಕ್ಕೆ ಕಳೆದ ತಿಂಗಳು ಪ್ರತಿಕ್ರಿಯೆ ನೀಡಿದ್ದ ಕರ್ನಾಟಕ ಸರ್ಕಾರ, ಅದಿರು ರಫ್ತಿನ ವಿರುದ್ಧ ತನ್ನ ನಿಲುವು
ಸ್ಪಷ್ಟಪಡಿಸಿತ್ತು.

ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ಜಿಲ್ಲೆಗಳಲ್ಲಿನ ಗಣಿಗಳಿಂದ ಅದಿರು ರಫ್ತು ಮಾಡುವುದಕ್ಕೆ ಸುಪ್ರೀಂ ಕೋರ್ಟ್ 2011ರಿಂದ ನಿಷೇಧ ಹೇರಿತ್ತು.

ಅಕ್ರಮ ಗಣಿಗಾರಿಕೆ ತಡೆಯುವ ನಿಟ್ಟಿನಲ್ಲಿ ಅದಿರು ರಫ್ತು ನಿಷೇಧಿಸಬೇಕು. ಅದಿರು ಮಾರಾಟದ ಮೇಲೂ ಕಠಿಣ ಕ್ರಮ ಕೈಗೊಂಡು ನಿಯಮಾವಳಿ ರೂಪಿಸಬೇಕು ಎಂದು ಕೋರಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...