Monday, October 7, 2024
Monday, October 7, 2024

ಕನ್ನಡದ ಆಚಂದ್ರಾರ್ಕ ಹೆಸರು,ಚಂದ್ರ ಆರ್ಯ

Date:

ಎಲ್ಲಾದರು ಇರು ಎಂತಾದರೂ ಇರು ,ಎಂದೆಂದಿಗು ನೀ ಕನ್ನಡವಾಗಿರು…

ಎಂಬ ಕುವೆಂಪು ಅವರ ಪ್ರಸಿದ್ಧ ಕವಿತೆಗೆ ಸಜೀವ ಮಾದರಿಯಾದ ಘಟನೆ 

ಮಾಧ್ಯಮಗಳಲ್ಲಿ ನೀವೀಗ ನೋಡಬಹುದು.

ತುಮಕೂರು ಜಿಲ್ಲೆ ಶಿರಾದ ದ್ವಾರಾಳು ಗ್ರಾಮದವರು.ಅಪ್ಪಟ ಕನ್ನಡ ಪ್ರತಿಭೆ ದೂರದ ಕೆನಡಾದಲ್ಲಿ ಕನ್ನಡದ ಕಂಪು ಬಿತ್ತರಿಸಿದೆ.

ಸದ್ಯ ಒಟಾವ ನಗರದ ತಂತ್ರಜ್ಞನ ಕಂಪನಿಯೊಂದಕ್ಕೆ  ಹೂಡಿಕೆ ನಿರ್ವಹಣಾ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಚಂದ್ರ ಆರ್ಯ ಅವರು ಕ್ರಿಯಾಶೀಲ ಮತ್ತು ಅನನ್ಯ ಚಿಂತನೆಗಳ ವ್ಯಕ್ತಿ.ದ್ವಿಪಕ್ಷೀಯವಾದ ಒಪ್ಪಂದಗಳಿಗೆ ಚಾಲನೆತುಂಬುವಲ್ಲಿ ಗಾಢಮನಸ್ಸುಳ್ಳವರು ಎಂದು ಮೆಚ್ಚಿಗೆ ನುಡಿಯಾಡಿದವರು ಕೆನಡಾದಲ್ಲಿನ ಭಾರತ ರಾಯಭಾರಿ ಶ್ರೀವಿಷ್ಣು ಪ್ರಕಾಶ್.

ನಮಗೆ ತಿಳಿದಂತೆ ಕನ್ನಡಿಗ  ಜೆ ಎಚ್ ಪಟೇಲ್ ಅವರುಕನ್ನಡದ ಮಾತುಗಳನ್ನ ಮೊದಲಬಾರಿಗೆ ಭಾರತೀಯ ಸಂಸತ್ತಿನಲ್ಲಿ ರಿಂಗಣಗುಡುವಂತೆ ಮಾಡಿದವರು.

ಈಗ ಸಾಗರಾದಾಚೆಯ ಸರ್ಕಾರದ ಸಂಸತ್ತಿನಲ್ಲಿ ಕನ್ನಡ ಕಸ್ತೂರಿ ಘಮಘಮ  ಹರಡುವಂತೆ ಮಾಡಿದವರು ಶ್ರೀ ಚಂದ್ರ ಆರ್ಯ.

ಕೇವಲ ಒಂದು ದಶಕದಲ್ಲ ಅವರ ಕೆನಡಾ ಸಾಧನೆ ಶ್ಲಾಘನೀಯ. 

ಕೆನಡಾಗೆ ಬಂದಿಳಿದಾಗ, ಯಾರ ಹೆಸರಿಲ್ಲ!.ಯಾರ ಫೋನ್ ನಂಬರುಗಳೂ ಇಲ್ಲ. ಇವತ್ತು 1700 ಪ್ರತಿಷ್ಠಿತರ ಹೆಸರುಗಳು ನನ್ನ ಬ್ಲಾಕ್ಬೆರಿ( ಮೊಬೈಲ್) ಯಲ್ಲಿದೆ ಎನ್ನುತ್ತಾರೆ ಚಂದ್ರ.ಈ ಮಾತುಗಳು ಅವರ ಶ್ರಮದ ದುಡಿಮೆಯ ಸಂಕೇತವಾಗಿವೆ. 

ಸದ್ಯ ಅವರು ಕೆನಡಾದ ನೇಪಿಯನ್ ಸಂಸತ್ ಕ್ಷೇತ್ರದ ಪ್ರತಿನಿಧಿಯಾಗಿದ್ದಾರೆ.

ಲಿಬರಲ್ ಪಕ್ಷದ ಅಭ್ಯರ್ಥಿಯಾಗಿ ಗೆದ್ದಿದ್ದಾರೆ. ಸಂಸದ್ ಸದಸ್ಯರ ತಂಡದ ಮುಖ್ಯಸ್ಥರಾಗಿರುವ ಅವರೀಗ ಕೆನಡಾದ ವಿದೇಶಾಂಗ ಮತ್ತು ವ್ಯಾಪಾರ ನೀತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಭಾರತದ ಸಚಿವರು ಮತ್ತು ಕಾನೂನು ನಿರ್ಮಾತೃಗಳು ಕೆನಡಾಗೆ ಭೇಟಿ ನೀಡಲು ಒತ್ತಾಯಿಸಿದ್ದಾರೆ.

ಕನ್ನಡದವರಾದ ಚಂದ್ರ ಆರ್ಯ ಅವರಿಗೆ  ಕನ್ನಡಿಗರ ಅಭಿನಂದನೆಗಳು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Legal Services Authority ಮಹಿಳೆ & ಮಕ್ಕಳ ಕಾನೂನುಗಳ ಸದುಪಯೋಗ ಆಗಬೇಕು- ನ್ಯಾ.ಮಂಜುನಾಥ ನಾಯಕ್

Legal Services Authority ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ...

JCI Shivamogga ಜೆಸಿಐ ಇಂಡಿಯಾ ವಲಯ- 24 ರ ಅಧ್ಯಕ್ಷರಾಗಿ ಗೌರೀಶ್ ಭಾರ್ಗವ ಆಯ್ಕೆ

JCI Shivamogga ಜೆಸಿಐ ಇಂಡಿಯಾ ವಲಯ -24 ಅಧ್ಯಕ್ಷರಾಗಿ ಶ್ರೀ...

Kittur Rani Chennamma ಕಿತ್ತೂರು ಉತ್ಸವ ಯಶಸ್ವಯಾಗಿ ನೆರವೇರಲಿ- ಎಸ್.ಎನ್.ಚನ್ನಬಸಪ್ಪ

Kittur Rani Chennamma ಈ ದೇಶದ ಸಂರಕ್ಷಣೆಗಾಗಿ ಹೋರಾಡಿದ ವೀರ ವನಿತೆ...