Sunday, May 24, 2026
Sunday, May 24, 2026

ಕನ್ನಡದ ಆಚಂದ್ರಾರ್ಕ ಹೆಸರು,ಚಂದ್ರ ಆರ್ಯ

Date:

ಎಲ್ಲಾದರು ಇರು ಎಂತಾದರೂ ಇರು ,ಎಂದೆಂದಿಗು ನೀ ಕನ್ನಡವಾಗಿರು…

ಎಂಬ ಕುವೆಂಪು ಅವರ ಪ್ರಸಿದ್ಧ ಕವಿತೆಗೆ ಸಜೀವ ಮಾದರಿಯಾದ ಘಟನೆ 

ಮಾಧ್ಯಮಗಳಲ್ಲಿ ನೀವೀಗ ನೋಡಬಹುದು.

ತುಮಕೂರು ಜಿಲ್ಲೆ ಶಿರಾದ ದ್ವಾರಾಳು ಗ್ರಾಮದವರು.ಅಪ್ಪಟ ಕನ್ನಡ ಪ್ರತಿಭೆ ದೂರದ ಕೆನಡಾದಲ್ಲಿ ಕನ್ನಡದ ಕಂಪು ಬಿತ್ತರಿಸಿದೆ.

ಸದ್ಯ ಒಟಾವ ನಗರದ ತಂತ್ರಜ್ಞನ ಕಂಪನಿಯೊಂದಕ್ಕೆ  ಹೂಡಿಕೆ ನಿರ್ವಹಣಾ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಚಂದ್ರ ಆರ್ಯ ಅವರು ಕ್ರಿಯಾಶೀಲ ಮತ್ತು ಅನನ್ಯ ಚಿಂತನೆಗಳ ವ್ಯಕ್ತಿ.ದ್ವಿಪಕ್ಷೀಯವಾದ ಒಪ್ಪಂದಗಳಿಗೆ ಚಾಲನೆತುಂಬುವಲ್ಲಿ ಗಾಢಮನಸ್ಸುಳ್ಳವರು ಎಂದು ಮೆಚ್ಚಿಗೆ ನುಡಿಯಾಡಿದವರು ಕೆನಡಾದಲ್ಲಿನ ಭಾರತ ರಾಯಭಾರಿ ಶ್ರೀವಿಷ್ಣು ಪ್ರಕಾಶ್.

ನಮಗೆ ತಿಳಿದಂತೆ ಕನ್ನಡಿಗ  ಜೆ ಎಚ್ ಪಟೇಲ್ ಅವರುಕನ್ನಡದ ಮಾತುಗಳನ್ನ ಮೊದಲಬಾರಿಗೆ ಭಾರತೀಯ ಸಂಸತ್ತಿನಲ್ಲಿ ರಿಂಗಣಗುಡುವಂತೆ ಮಾಡಿದವರು.

ಈಗ ಸಾಗರಾದಾಚೆಯ ಸರ್ಕಾರದ ಸಂಸತ್ತಿನಲ್ಲಿ ಕನ್ನಡ ಕಸ್ತೂರಿ ಘಮಘಮ  ಹರಡುವಂತೆ ಮಾಡಿದವರು ಶ್ರೀ ಚಂದ್ರ ಆರ್ಯ.

ಕೇವಲ ಒಂದು ದಶಕದಲ್ಲ ಅವರ ಕೆನಡಾ ಸಾಧನೆ ಶ್ಲಾಘನೀಯ. 

ಕೆನಡಾಗೆ ಬಂದಿಳಿದಾಗ, ಯಾರ ಹೆಸರಿಲ್ಲ!.ಯಾರ ಫೋನ್ ನಂಬರುಗಳೂ ಇಲ್ಲ. ಇವತ್ತು 1700 ಪ್ರತಿಷ್ಠಿತರ ಹೆಸರುಗಳು ನನ್ನ ಬ್ಲಾಕ್ಬೆರಿ( ಮೊಬೈಲ್) ಯಲ್ಲಿದೆ ಎನ್ನುತ್ತಾರೆ ಚಂದ್ರ.ಈ ಮಾತುಗಳು ಅವರ ಶ್ರಮದ ದುಡಿಮೆಯ ಸಂಕೇತವಾಗಿವೆ. 

ಸದ್ಯ ಅವರು ಕೆನಡಾದ ನೇಪಿಯನ್ ಸಂಸತ್ ಕ್ಷೇತ್ರದ ಪ್ರತಿನಿಧಿಯಾಗಿದ್ದಾರೆ.

ಲಿಬರಲ್ ಪಕ್ಷದ ಅಭ್ಯರ್ಥಿಯಾಗಿ ಗೆದ್ದಿದ್ದಾರೆ. ಸಂಸದ್ ಸದಸ್ಯರ ತಂಡದ ಮುಖ್ಯಸ್ಥರಾಗಿರುವ ಅವರೀಗ ಕೆನಡಾದ ವಿದೇಶಾಂಗ ಮತ್ತು ವ್ಯಾಪಾರ ನೀತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಭಾರತದ ಸಚಿವರು ಮತ್ತು ಕಾನೂನು ನಿರ್ಮಾತೃಗಳು ಕೆನಡಾಗೆ ಭೇಟಿ ನೀಡಲು ಒತ್ತಾಯಿಸಿದ್ದಾರೆ.

ಕನ್ನಡದವರಾದ ಚಂದ್ರ ಆರ್ಯ ಅವರಿಗೆ  ಕನ್ನಡಿಗರ ಅಭಿನಂದನೆಗಳು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...