Thursday, June 18, 2026
Thursday, June 18, 2026

ಅಕಾಲಿಕ ಮಳೆ: ಕೃಷಿಕರಿಗೆ ದೆಹಲಿ ಸರ್ಕಾರದ ಬಂಪರ್ ಪರಿಹಾರ

Date:

ಅಕಾಲಿಕ ಮಳೆಯಿಂದಾಗಿ ಬೆಳೆ ನಾಶ ಆಗಿರುವ ರೈತರಿಗೆ ದೆಹಲಿ ಸರ್ಕಾರವು ಪರಿಹಾರ ಘೋಷಣೆ ಮಾಡಿದೆ. ದೆಹಲಿ ಮುಖ್ಯಮಂತ್ರಿ ಶ್ರೀ ಅರವೀಂದ್ ಕೇಜ್ರಿವಾಲ್ ಅವರು ಪ್ರತಿ ಹೆಕ್ಟೇರ್ ಗೆ 50 ಸಾವಿರ ರೂಪಾಯಿಗಳ ಪರಿಹಾರ ಧನ ನೀಡುವುದಾಗಿ ತಿಳಿಸಿದ್ದಾರೆ.

ದೇಶದಲ್ಲಿಯೇ ಇದು ಅತ್ಯಂತ ಹೆಚ್ಚಿನ ಪರಿಹಾರವಾಗಿದೆ. ಇನ್ನಾ 2 ತಿಂಗಳಲ್ಲಿ ರೈತರಿಗೆ ಪರಿಹಾರ ತಲುಪಿಸಲಾಗುವುದು. ಬರುವ 15 ದಿನಗಳಲ್ಲಿ ಬೆಳೆ ನಾಶ ಸಮೀಕ್ಷೆ ಪೂರೈಸಲು ಅಧಿಕಾರಿಗಳಿಗೆ ಆದೇಶಿಸಿ, ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಕೃಷಿಕರ ತಂಡವು ತಮ್ಮನ್ನು ಬೇಟಿ ಮಾಡಿ ಅಕಾಲಿಕ ಮಳೆಯ ಪರಿಣಾಮವನ್ನು ಗಮನಕ್ಕೆ ತಂಡವು ತಂದಿದೆ. ಚಿಂತಿಸಬೇಡಿರಿ ಎಂದು ಧೈರ್ಯ ತುಂಬಿರುವುದಾಗಿ ಅರವೀಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ದೇಶದ ಇತರ ರಾಜ್ಯಗಳು ಕೇವಲ 8-10 ಸಾವಿರ ರೂಪಾಯಿಗಳ ಪರಿಹಾರ ನೀಡುತ್ತಿದೆ. ತಾವು ನೀಡಿದ ಈ ಪರಿಹಾರದ ಮೊತ್ತವು ಅತ್ಯಂತ ಅಧಿಕ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಬಿಜೆಪಿ ಪಕ್ಷವು ಪರಿಹಾರ ಮೊತ್ತ ಕಡಿಮೆಯಾಗಿದೆ ಅದನ್ನು ಪ್ರತಿ ಹೆಕ್ಟೇರ್ ಗಿಂತ ಪ್ರತಿ ಎಕರೆಗೆ ಹೆಚ್ಚಿಸಬೇಕು ಹಾಗೂ ಡಿಸೈಲ್, ವಿದ್ಯುತ್, ಕೃಷಿ ಉಪಕರಣಗಳ ಖರೀದಿಯಲ್ಲಿ ರೈತರಿಗೆ ಸಹಾಯಧನ ನೀಡಬೇಕು ಎಂದು ಒತ್ತಾಯ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...