Thursday, February 5, 2026
Thursday, February 5, 2026

2021-22 ನೇ ಸಾಲಿನ ಬೆಳೆವಿಮೆ ಹಣ ಇನ್ನೊಂದು ವಾರದಲ್ಲಿ ರೈತರಿಗೆ ತಲುಪಲಿದೆ

Date:

(2021-22ನೇ) ಸಾಲಿನ ಬೆಳೆ ವಿಮೆ ಹಣ ಇನ್ನೊಂದು ವಾರದಲ್ಲಿ ರೈತರ ಕೈ ಸೇರಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ತಿಳಿಸಿದರು.

ಹರಿಹರ ತಾಲೂಕಿನ ನಂದಿತಾವರೆ ಬಳಿಯ ಭಾಸ್ಕರರಾವ್‌ ಕ್ಯಾಂಪಿನಲ್ಲಿ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ರೈತರು ವಿವಿಧ ಬೆಳೆ ಬೆಳೆಯುವ ಮೂಲಕ ಸಮತೋಲನ ಕಾಪಾಡಬೇಕು. ಯಾವುದಾದರೊಂದು ಬೆಳೆಯ ಬೆಲೆ ಕೈಕೊಟ್ಟರೆ ಮತ್ತೊಂದು ಬೆಳೆ ಕೈಹಿಡಿಯುತ್ತದೆ. ಆದ್ದರಿಂದ ರೈತರು ಮಿಶ್ರಬೆಳೆ, ಬಹು ಬೆಳೆ ಬೆಳೆಯುವತ್ತ ಗಮನಹರಿಸಬೇಕು ಎಂದರು.

ಈಗಾಗಲೇ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಪ್ರಸಕ್ತ ವರ್ಷ ಈಗಷ್ಟೇ ಮುಂಗಾರು ಪ್ರಾರಂಭವಾಗಿದೆ.
ಕೆಲ ವ್ಯಾಪಾರಸ್ಥರು ದುರುದ್ದೇಶದಿಂದ ಅಕ್ರಮವಾಗಿ ಸಂಗ್ರಹ ಮಾಡಿಕೊಂಡು ಅದನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದಕ್ಕಾಗಿ ರಸಗೊಬ್ಬರ ಮತ್ತು ಬೀಜದ ಕೊರತೆಯಾಗುತ್ತದೆ ಎಂಬ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.

ರೈತರು ಇದನ್ನು ನಂಬಬಾರದು. ರಸಗೊಬ್ಬರ ಮತ್ತು ಬೀಜಕ್ಕೆ ಯಾವುದೇ ರೀತಿಯ ಕೊರತೆಯಿಲ್ಲ.
ಕೃತಕ ಗೊಬ್ಬರದ ಅಭಾವ ಉಂಟಾಗುವಂತೆ ಮಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ, ಕೃಷಿ ಅಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ಬಾರಿ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಿಂತ ಹೆಚ್ಚಿನ ಪರಿಹಾರ ನೀಡಲಾಗಿದೆ.
ಪ್ರಸ್ತುತ ವರ್ಷವೂ ಅಷ್ಟೇ ಪ್ರಮಾಣದಲ್ಲಿ ಪರಿಹಾರ ನೀಡಲಾಗುವುದು. ಭತ್ತದ ಬೆಳೆಗೆ ವಿಮಾ ಪರಿಹಾರ ವಿಷಯದಲ್ಲಿ ರೈತರು ಆತಂಕ ಪಡುವುದು ಬೇಡ. ಬಿರುಗಾಳಿಗೆ ಭತ್ತ ನೆಲಕ್ಕೆ ಬಿದ್ದಿರುವುದರಿಂದ ಅದು ಪ್ರಕೃತಿ ವಿಕೋಪ ಪರಿಹಾರದಡಿ ಬರುತ್ತದೆ. ಹಾಗಾಗಿ ಭತ್ತದ ಬೆಳೆಗೂ ಪರಿಹಾರ ಸಿಗಲಿದೆ.
ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೆ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ನಷ್ಟ ಅಂದಾಜು ಮಾಡುವುದು ಹಾಗೂ ಅವರಿಗೆ ಸೂಕ್ತ ಬೆಳೆ ಹಾನಿ ಪರಿಹಾರ ನೀಡುವುದರ ಕಡೆಗೆ ಗಮನ ಹರಿಸಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...