Tuesday, August 25, 2026
Tuesday, August 25, 2026

ಅಡ್ಡಹಾದಿಯಿಂದ ಬಿಜೆಪಿ ಅಧಿಕಾರಕ್ಕೆ ಪ್ರಯತ್ನ-ಕುಮಾರಸ್ವಾಮಿ

Date:

2006ರಲ್ಲಿ ಜೆಡಿಎಸ್ ದೆಸೆಯಿಂದ ಅಧಿಕಾರದ ರುಚಿ ಕಂಡ ಬಿಜೆಪಿಗೆ ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯುವುದು ಚಾಳಿ ಆಗಿಬಿಟ್ಟಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು,ಬಿಜೆಪಿಯ ನಯವಂಚಕ & ಅನೈತಿಕ ರಾಜಕಾರಣದ ಮುಖವನ್ನು ಬೆಂಗಳೂರು ನಗರದ ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಮುನಿರಾಜು ಎಂಬ ಮಹಾಶಯರೇ ಬಹಿರಂಗಪಡಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುವುದು ಅಡ್ಡದಾರಿಯಲ್ಲೇ ಎನ್ನುವುದು ಈಗ ರುಜುವಾತಾಗಿದೆ. 1998ರ ವಿಧಾನಸಭೆ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಹಾಲಿ ಕಂದಾಯ ಸಚಿವ ಆರ್.ಅಶೋಕ್ ಸ್ಪರ್ಧಿಸಿದಾಗ ಯಲಹಂಕದಿಂದ ಬಂದಿದ್ದ 1,000 ಕಾರ್ಯಕರ್ತರು ತಲಾ 5ರಿಂದ 10 ಕಳ್ಳವೋಟು ಹಾಕಿ ಅವರನ್ನು ಗೆಲ್ಲಿಸಿದ್ದರು!!’ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಆಪರೇಷನ್ ಕಮಲ ಎಂಬ ಅನೈತಿಕ ದಾರಿಯಲ್ಲಿ ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವದ ಅಡಿಪಾಯವನ್ನೇ ಬಿಜೆಪಿ ಅಭದ್ರಗೊಳಿಸಿದೆ ಎಂದು ಟೀಕಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...