Sunday, May 24, 2026
Sunday, May 24, 2026

ಬೆಂಗಳೂರಿನಲ್ಲಿ ಕೋವಿಡ್ ಹೊಸಪ್ರಕರಣ ಪತ್ತೆ!

Date:

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ 100 ಆಸುಪಾಸಿನಲ್ಲಿದ್ದ ಕೊರೋನಾ ಸೋಂಕು ಹೊಸ ಪ್ರಕರಣಗಳು 150ಕ್ಕೆ ಹೆಚ್ಚಳವಾಗಿವೆ.

ನಗರದಲ್ಲಿ ಶನಿವಾರ 150 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 162 ಮಂದಿ ಗುಣಮುಖರಾಗಿದ್ದಾರೆ.
ಸೋಂಕಿತರ ಸಾವು ವರದಿಯಾಗಿಲ್ಲ. ಸದ್ಯ 1579 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಸೋಂಕು ಪರೀಕ್ಷೆಗಳು 12 ಸಾವಿರ ನಡೆದಿದ್ದು, ಪಾಸಿಟಿವಿಟಿ ದರ ಶೇ.1.2ರಷ್ಟುದಾಖಲಾಗಿದೆ.

ಶುಕ್ರವಾರಕ್ಕೆ ಹೋಲಿಸಿದರೆ ಪರೀಕ್ಷೆಗಳಲ್ಲಿ ಹೆಚ್ಚಿನ ವ್ಯತ್ಯಯವಾಗದಿದ್ದರೂ ಹೊಸ ಪ್ರಕರಣಗಳು ಬರೋಬ್ಬರಿ 61 ಹೆಚ್ಚಳವಾಗಿವೆ. (ಶುಕ್ರವಾರ 89 ಕೇಸ್‌, ಸಾವು ಶೂನ್ಯ, ಪಾಸಿಟಿವಿಟಿ ದರ ಶೇ.0.84)ಬೀದಿಗೆ ಬಂದ ಕೋವಿಡ್ ವಾರಿಯರ್ಸ್ ಕುಟುಂಬಗಳು
ಈ ಹಿಂದೆ ಮೇ 11ರಂದು 156 ಪ್ರಕರಣಗಳು ಪತ್ತೆಯಾಗಿದ್ದವು.

ಬಳಿಕ ಇಳಿಮುಖವಾಗಿ ಕಳೆದ ಒಂದು ವಾರದಿಂದ ಕೊರೋನಾ ಪ್ರಕರಣಗಳು 100ರ ಗಡಿಯಲ್ಲಿ ವರದಿಯಾಗುತ್ತಿದ್ದವು. ಈಗ ಮತ್ತೆ 11 ದಿನಗಳ ಬಳಿಕ 150ಕ್ಕೆ ಹೆಚ್ಚಳವಾಗಿವೆ. ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳ ಪೈಕಿ ಶೇ.97ರಷ್ಟು(155ರಲ್ಲಿ 150 ಕೇಸ್‌) ಬೆಂಗಳೂರು ಒಂದರಲ್ಲಿಯೇ ಪತ್ತೆಯಾಗಿವೆ.

ಇನ್ನು ಪರೀಕ್ಷೆ ಹೆಚ್ಚಳವಾಗದಿದ್ದರೂ ಹೊಸ ಪ್ರಕರಣಗಳು ಹೆಚ್ಚಾಗಿರುವುದು ಒಂದಿಷ್ಟುಆತಂಕ ಮೂಡಿಸಿದೆ.
ಸದ್ಯ ಸಕ್ರಿಯ ಸೋಂಕಿತರ ಪೈಕಿ 9 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, ಈ ಪೈಕಿ ಐಸಿಯುನಲ್ಲಿ ಒಬ್ಬರು, ಆಕ್ಸಿಜನ್‌ ಹಾಸಿಗೆಯಲ್ಲಿ ಇಬ್ಬರು, ಸಾಮಾನ್ಯ ಹಾಸಿಗೆಗಳಲ್ಲಿ ಆರು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಳಿದ 1570 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ. 5ಕ್ಕಿಂತ ಕಡಿಮೆ ಪ್ರಕರಣಗಳಿರುವ ನಾಲ್ಕು ಕ್ಲಸ್ಟರ್‌ ಪ್ರದೇಶಗಳಿವೆ. ಈವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 17.86 ಲಕ್ಷಕ್ಕೆ, ಗುಣಮುಖರ ಸಂಖ್ಯೆ 17.67 ಲಕ್ಷಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 16,964 ಇದೆ ಎಂದು ಬಿಬಿಎಂಪಿ ಕೊರೋನಾ ವರದಿಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...