Monday, February 2, 2026
Monday, February 2, 2026

ಟ್ರಂಪ್ ಈಗ “ಟ್ರುಥ್” ಒಡೆಯ

Date:

ಹಿಂಸಾತ್ಮಕ ಕ್ಯಾಪಿಟಲ್ ದಂಗೆ ಮತ್ತು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಮತ್ತು ಟ್ವಿಟರ್ ನಿಂದ ನಿಷ್ಕ್ರಿಯಗೊಳಿಸಿದ ನಂತರ ತನ್ನ ಅಂತರ್ಜಾಲದ ಪ್ರಾಬಲ್ಯವನ್ನು ಮರುಪಡೆಯಲು ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮದೇ ಸಾಮಾಜಿಕ ಜಾಲತಾಣವನ್ನು ಆರಂಭಿಸುವ ಯೋಜನೆಯನ್ನು ಘೋಷಿಸಿದ್ದಾರೆ.
“Truth social” ಮೀಡಿಯಾ ಮತ್ತು ಟೆಕ್ನಾಲಜಿ ಗ್ರೂಪ್ ಎಂಬ ಮಾಧ್ಯಮ ಸಂಸ್ಥೆ ಜೊತೆಗೆ “ಟ್ರುಥ್” (ಸತ್ಯ) ಎಂಬ ಆಪ್ ಆರಂಭಿಸುವುದಾಗಿ ತಿಳಿಸಿದ್ದಾರೆ. ಇದು ಈಗಾಗಲೇ ಆಪಲ್ ನ ಆಫ್ ಸ್ಟೋರ್ ನಲ್ಲಿ ಫ್ರೀ- ಆರ್ಡರ್ ಗೆ ಲಭ್ಯವಿದೆ ಎಂದು ಹೇಳಿದ್ದಾರೆ.
“ನಾವು ಟ್ವಿಟರ್ ನಲ್ಲಿ ತಾಲಿಬಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ. ಸಮಾಜಘಾತುಕ ಶಕ್ತಿಗಳಿಗೆ ಅವಕಾಶ ಇರುವ ಟ್ವಿಟರ್ ನಲ್ಲಿ ಅಮೆರಿಕ ಜನರ ಆಗಿನ ಅಧ್ಯಕ್ಷರಾಗಿದ್ದವರಿಗೆ ಮಾತ್ರ ನಿರ್ಬಂಧ ಹೇರಲಾಗಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ ” ಎಂದು ಟ್ರಂಪ್ ಕಿಡಿಕಾರಿದ್ದಾರೆ. ವಿಶ್ವದ ದಿಗ್ಗಜ ಸಾಮಾಜಿಕ ಜಾಲತಾಣ ಕಂಪನಿಗಳಿಗೆ ಸಮವಾದ ಪೈಪೋಟಿಯನ್ನು ತಮ್ಮ ಹೊಸ ಆಪ್ ನೀಡುವುದರಲ್ಲಿ ಸಂದೇಹವಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಆಕ್ವಿಸಿಷನ್ ಕಾರ್ಪೊರೇಷನ್ ಎಂಬ ಕಂಪನಿಯ ಜೊತೆಗೂಡಿ ಆಪ್ ಅಭಿವೃದ್ಧಿಗೊಳಿಸಲಾಗಿದ್ದು, ಇದು ಸುದ್ದಿ, ಆನ್ಲೈನ್ ಗೇಮ್ಸ್, ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಸಹ ಒದಗಿಸುತ್ತದೆ ಎಂದು ಹೇಳಿದ್ದಾರೆ.ತಾವು ಅಮೇರಿಕಾ ಅಧ್ಯಕ್ಷಗಾದಿಯನ್ನ ಏರುವಲ್ಲಿ ಸಾಮಾಜಿಕ ಜಾಲತಾಣಗಳು ಪ್ರಮುಖ ಪಾತ್ರ ವಹಿಸಿವೆ ಎಂಬುದನ್ನು ಸ್ಮರಿಸಿಕೊಂಡಿದ್ದಾರೆ.
ಈಗಾಗಲೇ ವರ್ಷಾರಂಭದಲ್ಲೇ “From the desk of Donald J Trump ” ಎಂಬ ಬ್ಲಾಗ್ ಬರವಣಿಗೆಯಲ್ಲಿ ಸಕ್ರಿಯರಾಗಿದ್ದಾರೆ.ಬಹಳ ಮಂದಿ ಸಧ್ಯದ ಬೃಹತ್ ಸಾಮಾಜಿಕ ಜಾಲತಾಣ ಸಂಘಟನೆಯ ( Big Tech) ವಿರುದ್ಧ ಸೆಟೆದು ನಿಲ್ಲುವ ಪ್ರಯತ್ನ ಯಾರಾದರೂ ಮಾಡಬಹುದಲ್ಲ ? ಎಂಬ ಪ್ರಶ್ನೆಗೆ ತಾವು ಸಧ್ಯದಲ್ಲೇ ಎದ್ದು ನಿಲ್ಲುವುದಾಗಿ ಹೇಳಿದ್ದಾರೆ.
ತಂತ್ರಜ್ಞಾನವು ಅತ್ಯಂತ ತೀವ್ರಗತಿಯಲ್ಲಿ ಬೆಳೆಯುತ್ತಿರುವ ಇಂದಿನ ಜಗತ್ತಿನಲ್ಲಿ ಮಾಧ್ಯಮಗಳಲ್ಲಿ ಆಂತರಿಕ ಪೈಪೋಟಿ ಇದೆ. ಇಂತಹ ಸಂದರ್ಭದಲ್ಲಿ ವೈಜ್ಞಾನಿಕ ಪ್ರಗತಿಯ ಮುಂಚೂಣಿಯಲ್ಲಿರುವ ಅಮೆರಿಕಾದ ಮಾಜಿ ಅಧ್ಯಕ್ಷರೊಬ್ಬರು ಸಾಮಾಜಿಕ ಜಾಲತಾಣವನ್ನು ಆರಂಭ ಮಾಡಿರುವುದು ಎಲ್ಲರ ಗಮನ ಸೆಳೆಯುವಂತಿದೆ. ಪ್ರಸಕ್ತ ಅವರು ಆರಂಭಿಸಿರುವ “ಟ್ರುಥ್ ಸೋಶಿಯಲ್” ಜಾಲತಾಣ ಹೇಗೆ ಇಡೀ ಜಗತ್ತನ್ನು ವ್ಯಾಪಿಸುತ್ತದೆ ಎಂದು ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...