Tuesday, February 3, 2026
Tuesday, February 3, 2026

ರಾಜ್ಯದಲ್ಲೂ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿ ಜನತೆ

Date:

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ತೆರಿಗೆ ಕಡಿತಗೊಳಿಸಿದೆ.

ರಾಜ್ಯದಲ್ಲಿಯೂ ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯನ್ನು 9.5 ರೂ., ಡೀಸೆಲ್ ಬೆಲೆಯನ್ನು 8 ರೂ.ನಷ್ಟು ಕಡಿಮೆ ಮಾಡಿದ್ದು, ಜನಸಾಮಾನ್ಯರಿಗೆ ಅನುಕೂಲವಾಗಿದೆ. ಇದೇ ರೀತಿ ರಾಜ್ಯದಲ್ಲಿ ತೆರಿಗೆ ಕಡಿಮೆ ಮಾಡಿ ಹೊರೆ ಇಳಿಸಬೇಕೆಂಬ ಅಭಿಪ್ರಾಯ ಕೇಳಿಬಂದಿದೆ.
ಇದಕ್ಕೆ ಪೂರಕವಾಗಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದ ಬೆನ್ನಲ್ಲೇ ಕೇರಳ, ಒಡಿಶಾ, ಮಹಾರಾಷ್ಟ್ರದಲ್ಲಿ ತೆರಿಗೆ ಇಳಿಕೆ ಮಾಡಲಾಗಿದೆ.
ರಾಜ್ಯದಲ್ಲಿಯೂ ಸುಂಕ ಇಳಿಕೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಒತ್ತಾಯಿಸಿದ್ದಾರೆ.

ಈ ಹಿಂದೆ ಕೇಂದ್ರ ಸರ್ಕಾರ ತೈಲ ಬೆಲೆ ಕಡಿಮೆ ಮಾಡಿದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೂಡ ತೆರಿಗೆ ಕಡಿತಗೊಳಿಸಿದ್ದು, ಈ ಬಾರಿ ಕೂಡ ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತಗೊಳಿಸುವ ಸಾಧ್ಯತೆ ಇದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ದಾವೋಸ್ ಪ್ರವಾಸದಿಂದ ವಾಪಸಾದ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...