Tuesday, August 25, 2026
Tuesday, August 25, 2026

ದಕ್ಷಿಣ ಚಿರಾಪುಂಜಿ ಪಟ್ಟದಿಂದ ಜಾರುತ್ತಿರುವ ಆಗುಂಬೆ

Date:

ದಕ್ಷಿಣ ಭಾರತದ ಚಿರಾಪುಂಜಿ ಎಂದೇ ಬಿರುದು ಪಡೆದುಕೊಂಡಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಕೆಎಸ್‌ಡಿಎಂಎ) ಪ್ರಕಾರ 2015 ಮತ್ತು 2021ರ ನಡುವಿನ ಏಳು ವರ್ಷಗಳಲ್ಲಿ 5 ಬಾರಿ ಉಡುಪಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಹೆಚ್ಚು ಮಳೆ ಪ್ರಮಾಣ ದಾಖಲಾಗಿದೆ.
ಅಂಕಿ-ಅಂಶಗಳ ಪ್ರಕಾರ ಉಡುಪಿ ಜಿಲ್ಲೆಯ ಬೈರಂಪಳ್ಳಿಯಲ್ಲಿ 2016ರಲ್ಲಿ ಅತಿ ಹೆಚ್ಚು ಅಂದರೆ 5,916 ಮಿ. ಮೀ. ಪ್ರಮಾಣದ ಮಳೆ ದಾಖಲಾಗಿದೆ. 2017ರಲ್ಲಿ ಕಾರ್ಕಳ ತಾಲೂಕಿನ ಶಿರಾಳುವಿನಲ್ಲಿ 6,936 ಮಿ. ಮೀ. ಮಳೆಯಾಗಿದೆ.

ಉಡುಪಿ ಜಿಲ್ಲೆ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾಗಿ ಗುರುತಿಸಿಕೊಂಡಿದೆ.

ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 2016ರಲ್ಲಿ 5,524 ಮಿ.ಮೀ. ಮತ್ತು 2017ರಲ್ಲಿ 5,345 ಮಿ.ಮೀ. ಮಳೆಯೊಂದಿಗೆ ಅಗ್ರಸ್ಥಾನ ಪಡೆದಿತ್ತು.

ಆದರೆ 2019ರಲ್ಲಿ ಉಡುಪಿಯ ಹೆಬ್ರಿಯ ದಾಖಲೆ ಪ್ರಮಾಣದ 9,340 ಮಿ. ಮೀ. ಮಳೆಯೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. 2020ರಲ್ಲಿ ಇನ್ನಂಜೆಯಲ್ಲಿ 7,988 ಮಿ. ಮೀ. ಮಳೆ ಪ್ರಮಾಣ ದಾಖಲಾಗುವ ಮೂಲಕ ಅಗ್ರಸ್ಥಾನ ಪಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...