Saturday, March 28, 2026
Saturday, March 28, 2026

ಪರಿಷತ್ ಚುನಾವಣಾ ಕಣಕ್ಕೆ ಬಹುತೇಕ ಅನಿರೀಕ್ಷಿತ ಅಭ್ಯರ್ಥಿಗಳು

Date:

ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು. ಜೆಡಿಎಸ್‌ ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿವೆ. ಕಳೆದ ದಿನ ಕಾಂಗ್ರೆಸ್‌ ತಮಗೆ ಲಭಿಸಿರುವ 2 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿತ್ತು.

ಪರಿಷತ್ತಿನ 7 ಸ್ಥಾನಗಳ ಪೈಕಿ ಕಾಂಗ್ರೆಸ್‌ಗೆ 2 ಸ್ಥಾನಗಳು ಸಿಗಲಿವೆ. ಆ 2 ಸ್ಥಾನಗಳಲ್ಲಿ ಒಂದನ್ನು ಹಿಂದುಳಿದ ವರ್ಗ ಮತ್ತು ಇನ್ನೊಂದನ್ನು ಮುಸ್ಲಿಂ ಅಥವಾ ಕ್ರೈಸ್ತ ಸಮುದಾಯಕ್ಕೆ ಕೊಡಲು ಸಿದ್ದರಾಮಯ್ಯ ಹೈಕಮಾಂಡ್‌ಗೆ ಮನವಿ ಮಾಡಿದ್ದರು ಎನ್ನಲಾಗಿತ್ತು. ಆದರೆ, ಹಿರಿಯ ನಾಯಕರು ಸೂಚಿಸಿದ್ದ ಹೆಸರುಗಳಿಗೆ ಮಣೆ ಹಾಕದ ಕಾಂಗ್ರೆಸ್‌ ಹೈಕಮಾಂಡ್‌ ಹೊಸ ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ. ಕೆ. ಅಬ್ದುಲ್ ಜಬ್ಬಾರ್ ಮತ್ತು ಎಂ. ನಾಗರಾಜ್ ಯಾದವ್ ಅವರು ಕಾಂಗ್ರೆಸ್‌ ಅಭ್ಯರ್ಥಿಗಳಾಗಿದ್ದಾರೆ.

ಇದೇ ದಾರಿ ಹಿಡಿದಿರುವ ಬಿಜೆಪಿ, ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಅಚ್ಚರಿ ಮೂಡಿಸಿದೆ. ಈ ಹಿಂದೆ ಬಿ.ಎಸ್‌ ಯಡಿಯೂರಪ್ಪ ತಮ್ಮ ಮಗ ಬಿ.ವೈ ವಿಜಯೇಂದ್ರಗೆ ಟಿಕೆಟ್‌ ನೀಡುವಂತೆ ಲಾಬಿ ಮಾಡಿದ್ದರು ಎನ್ನಲಾಗಿತ್ತು. ಆದರೆ, ಈಗ ಹಿರಿಯರ ಮಾತಿಗೆ ಸೊಪ್ಪು ಹಾಕದ ಬಿಜೆಪಿ ಹೈಕಮಾಂಡ್‌, ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಕೇಶವಪ್ರಸಾದ್, ಲಕ್ಷ್ಮಣ ಸವದಿಗೆ ಟಿಕೆಟ್ ನೀಡಿ ಅಚ್ಚರಿ ಮೂಡಿಸಿದೆ. ಈ ಬೆಳವಣಿಯನ್ನು ಹಲವರು ಸಂತೋಷದಿಂದ ಸ್ವಾಗತಿಸಿದ್ದಾರೆ. ಇನ್ನು ಪಶ್ಚಿಮ ಕ್ಷೇತ್ರದಿಂದ ಬಸವರಾಜ ಹೊರಟ್ಟಿ ಅಭ್ಯರ್ಥಿಯಾಗಿದ್ದಾರೆ.

ಇನ್ನು ಜೆಡಿಎಸ್‌ನಿಂದ ಕೊನೆ ಹಂತದಲ್ಲಿ ಶರವಣಗೆ ಜೆಡಿಎಸ್ ಟಿಕೆಟ್‌ ನೀಡಿದೆ. ನಿನ್ನೆ
ಬೆಳಗ್ಗೆ 11.30ಕ್ಕೆ ಶರವಣ ಅವರು ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆಗೆ ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಯಾಗಿದೆ.
ಸದ್ಯ ವಿದ್ಯಮಾನದ ಪ್ರಕಾರ ಈ ಎಲ್ಲ ಅಭ್ಯರ್ಥಿಗಳೂ ಅವಿರೋಧ ಆಯ್ಕೆ ಆಗುವ ಸಂಭವ ಹೆಚ್ಚಾಗಿದೆ ಎಂದು ರಾಜಕೀಯ ಪರಿಣಿತರ ಲೆಕ್ಕಾಚಾರವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಆಕಸ್ಮಿಕ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

Breaking News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮಿಪದ...

CM Siddharamaih ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ- ಮುಖ್ಯಮಂತ್ರಿ ಸಿದ್ಧರಾಮಯ್ಯ.

CM Siddharamaih ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ, ಜನ...

Shri Mahavir Jayanti ಮಾರ್ಚ್ 30. ಶ್ರೀಮಹಾವೀರ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಜ್ಜು.

Shri Mahavir Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ...

Davangere By Election ಸಾದಿಕ್ ಪೈಲ್ವಾನ್ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ.

Davangere By Election ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ...