Tuesday, August 25, 2026
Tuesday, August 25, 2026

ಸ್ಮಾರ್ಟ್ ಸಿಟಿ ಕಾಮಗಾರಿ ಅವೈಜ್ಞಾನಿಕ : ಕಾಂಗ್ರೆಸ್ ಪ್ರತಿಭಟನೆ

Date:

ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳು ಅವೈಜ್ಞಾನಿಕವಾಗಿದೆ. ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಈ ಸಂಬಂಧ ಕೂಡಲೇ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮಂಗಳವಾರ ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಕಾಮಗಾರಿಯಲ್ಲಿ ಶೇ.40ರಷ್ಟು ಕಮಿಷನ್ ಪಡೆಯಲಾಗಿದೆ. ಪಾಲಿಕೆ ಯಾಗಲಿ, ಜಿಲ್ಲಾಡಳಿತವಾಗಲಿ ಕಾಮಗಾರಿ ನಡೆಸುವಲ್ಲಿ ಸಂಪೂರ್ಣ ವೈಫಲ್ಯ ಕಂಡಿದೆ ಎಂದು ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರು ಮಾತನಾಡಿ, ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿ ಗಳಿಂದಾಗಿ ಇಡೀ ನಗರವೇ ಹಾಳಾಗಿದೆ. ಕಳೆದ ಒಂದೆರಡು ದಿನಗಳಲ್ಲಿ ಬಿದ್ದ ಭಾರೀ ಮಳೆಯಿಂದ ಬಡವರ ಬದುಕು ಮೂರಾಬಟ್ಟೆಯಾಗಿದೆ. ರಾಜಕಾಲುವೆ ಗಳಲ್ಲಿ ಹೂಳು ತುಂಬಿಕೊಂಡಿದೆ. ನೀರು ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನುಗ್ಗಿದೆ. ಚರಂಡಿಗೆ ನೀರು ಸರಾಗವಾಗಿ ಸಾಗದೆ ರಸ್ತೆ ಮೇಲೆ ನೀರು ಹರಿದಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲ ನೀರುಪಾಲಾಗಿವೆ. ಇದಕ್ಕೆಲ್ಲಾ ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿಗಳೇ ಕಾರಣ. ಅಧಿಕಾರಿಗಳು ಮತ್ತು ಆಡಳಿತ ಪಕ್ಷದವರು ಸೇರಿಕೊಂಡು ಬಾರಿ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಚ್.ಪಿ. ಗಿರೀಶ್, ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...