Thursday, December 18, 2025
Thursday, December 18, 2025

ಮೋದಿಯವರದ್ದು ದೇಶದ ಬಹುಭಾಗ ಜನರನ್ನ ಹೊರಗಿಡುವ ಮನಸ್ಥಿತಿ-ರಾಹುಲ್ ಟೀಕೆ

Date:

ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಅವರು ಭಾರತದ ಕಲ್ಪನೆಗೆ ವಿರುದ್ಧವಾಗಿ ನಡೆಯುತ್ತಿದ್ದಾರೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕಾರ್ಪಸ್ ಕ್ರಿಸ್ಟಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಇಂಡಿಯಾ @ 75 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ನರೇಂದ್ರ ಮೋದಿ ಅವರು ಭಾರತವನ್ನು ಒಳಗೊಳ್ಳದ ಹಾಗೂ ದೇಶದ ಜನಸಂಖ್ಯೆಯ ಬಹುಭಾಗವನ್ನು ಹೊರಗಿಡುವ ಮನಸ್ಥಿತಿಯನ್ನು ಹೊಂದಿದ್ದಾರೆ.

ಇದು ಮೋದಿ ಅವರು ದೇಶಕ್ಕೆ ಮಾಡುತ್ತಿರುವ ಅನ್ಯಾಯ ಹಾಗೂ ದೇಶದ ಕಲ್ಪನೆಗೆ ವಿರುದ್ಧವಾಗಿದೆ ಎಂದು ಟೀಕಿಸಿದ್ದಾರೆ.

ಜನರನ್ನು ಹೊರಗಿಟ್ಟು ಭಾರತದ ನಿರ್ಮಾಣದ ದೃಷ್ಟಿ ಇಟ್ಟುಕೊಂಡಿದ್ದರೆ ಅದು ನನಗೆ ಸಮಸ್ಯೆಯಾಗಿ ಪರಿಣಮಿಸುತ್ತದೆ. ಈ ವೇಳೆ ಯಾರನ್ನು ಹೊರಗಿಡಲಾಗುತ್ತದೆ ಎಂದು ನಾನು ಅಂಜುವುದಿಲ್ಲ. ನನಗೆ ಅಲ್ಲೊಂದು ಸಮಸ್ಯೆ ಕಾಣುತ್ತಿರುತ್ತದೆ. ಈ ದೃಷ್ಟಿಕೋನದಿಂದ ಬಹುಪಾಲು ಜನರಿಗೆ ಅನ್ಯಾಯವಾಗಿದೆ. ಹೊರಗಿಡಲ್ಪಡುವ ಜನರಲ್ಲಿರುವ ಅಪಾರವಾದ ಶಕ್ತಿಯನ್ನು ನಿರ್ಲಕ್ಷ್ಯ ಮಾಡಿದಂತಾಗುತ್ತದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ನೀವು ಪ್ರತಿಯೊಬ್ಬ ವ್ಯಕ್ತಿಯನ್ನೂ ಸಹಾನುಭೂತಿಯಿಂದ ಕಾಣಬೇಕು. ಆದರೆ, ಪ್ರಧಾನಿ ಮೋದಿ ಅವರು ನಮ್ಮ ದೊಡ್ಡ ಮಟ್ಟದ ಜನಸಂಖ್ಯೆಯನ್ನು ಹೊರಗಿಟ್ಟು ಭಾರತದ ದೃಷ್ಟಿಕೋನವನ್ನು ನಿರ್ಮಾಣ ಮಾಡಲು ಹೊರಟಿರುವುದು ತಪ್ಪು. ಅದು ಭಾರತದ ದೃಷ್ಟಿಕೋನವಲ್ಲ. ಬದಲಿಗೆ ಮೋದಿ ಅವರ ದೃಷ್ಟಿಕೋನವಾಗಿದೆ ಎಂದು ಟೀಕಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...