Saturday, March 21, 2026
Saturday, March 21, 2026

ಇಬ್ರಾಹಿಂ ಹೇಳಿಕೆಗೆ ಮಂಜಮ್ಮ ಜೋಗತಿ ಬೇಸರ

Date:

ರಾಜ್ಯದಲ್ಲಿ ಇರುವುದು ಬಿಜೆಪಿ ಸರ್ಕಾರ ಅಲ್ಲ. ಮಂಗಳಮುಖಿ ಸರ್ಕಾರ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತಂದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ. ಆದಷ್ಟು ಬೇಗ ಈ ಮಂಗಳಮುಖಿ ಸರ್ಕಾರದಿಂದ ಮುಕ್ತಿಪಡೆಯೋಣ. ಇವರ ಜೊತೆ ಜಗಳ ಆಡುವುದಕ್ಕೂ ಆಗಲ್ಲ. ಗಂಡಸರಾದರೆ ಗಂಡಸರನ್ನು ಕಳುಹಿಸಬಹುದು. ಹೆಂಗಸರಾದರೆ ಹೆಂಗಸರನ್ನು ಕಳುಹಿಸಬಹುದು. ಇದು ಗಂಡಸೂ ಅಲ್ಲ ಹೆಂಗಸೂ ಅಲ್ಲ, ಕೈ ತಟ್ಟುತ್ತಾರೆ. ನಾವು ಹಿಂದೆ ಸರಿಯಬೇಕಾಗುತ್ತದೆ. ಎಷ್ಟು ಬೈದರೂ ಎಷ್ಟು ಉಗಿದರೂ ಹ್ಹಿ ಹ್ಹಿ ಹ್ಹೀ ಅಂತಾರೆ ಎಂದು ಸಿ.ಎಂ. ಇಬ್ರಾಹಿಂ ಅವರು ರಾಯಚೂರಿನ ಮುದಗಲ್‌ನಲ್ಲಿ ಇತ್ತೀಚೆಗಷ್ಟೇ ಹೇಳಿದ್ದರು.

ಈ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಬಿ. ಮಂಜಮ್ಮ ಜೋಗತಿ ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಇಬ್ರಾಹಿಂ ಹೇಳಿಕೆಯ ವರದಿಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಅವರು, ನನ್ನ ತಂದೆ ಕೂಡ ಹೀಗೆ ಹೇಳಿದ್ದರು. ಗಂಡಾಗಿದ್ದರೆ ಕೆಲಸ ಕೊಡಿಸುತ್ತಿದ್ದೆ, ಹೆಣ್ಣಾಗಿದ್ದರೆ ಮದುವೆ ಮಾಡಿಸುತ್ತಿದ್ದೆ. ಕುರುಡ ಕುಂಟ ಆಗಿದ್ದರೆ ಮನೆಯಲ್ಲೇ ಇರಿಸಿಕೊಂಡು ಊಟ ಹಾಕುತ್ತಿದ್ದೆ.

ನಾನು ಮಂಗಳಮುಖಿ, ಕಲಾವಿದೆ, ಕನ್ನಡತಿ. ಸಮಾಜ ಗೌರವಿಸುತ್ತಿದೆ ನಮ್ಮನ್ನು. ಹೀಗೆ ಅವಮಾನ ಮಾಡಬಾರದಿತ್ತು ಸರ್. ನಿಮ್ಮ ರಾಜಕೀಯಕ್ಕೆ ನೀವು ಕೈ ತಟ್ಟಿದ್ದೀರಿ ಇವತ್ತು ಎಂದು ಟ್ವೀಟ್ ನಲ್ಲಿ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...