Sunday, May 17, 2026
Sunday, May 17, 2026

ಇಬ್ರಾಹಿಂ ಹೇಳಿಕೆಗೆ ಮಂಜಮ್ಮ ಜೋಗತಿ ಬೇಸರ

Date:

ರಾಜ್ಯದಲ್ಲಿ ಇರುವುದು ಬಿಜೆಪಿ ಸರ್ಕಾರ ಅಲ್ಲ. ಮಂಗಳಮುಖಿ ಸರ್ಕಾರ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತಂದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ. ಆದಷ್ಟು ಬೇಗ ಈ ಮಂಗಳಮುಖಿ ಸರ್ಕಾರದಿಂದ ಮುಕ್ತಿಪಡೆಯೋಣ. ಇವರ ಜೊತೆ ಜಗಳ ಆಡುವುದಕ್ಕೂ ಆಗಲ್ಲ. ಗಂಡಸರಾದರೆ ಗಂಡಸರನ್ನು ಕಳುಹಿಸಬಹುದು. ಹೆಂಗಸರಾದರೆ ಹೆಂಗಸರನ್ನು ಕಳುಹಿಸಬಹುದು. ಇದು ಗಂಡಸೂ ಅಲ್ಲ ಹೆಂಗಸೂ ಅಲ್ಲ, ಕೈ ತಟ್ಟುತ್ತಾರೆ. ನಾವು ಹಿಂದೆ ಸರಿಯಬೇಕಾಗುತ್ತದೆ. ಎಷ್ಟು ಬೈದರೂ ಎಷ್ಟು ಉಗಿದರೂ ಹ್ಹಿ ಹ್ಹಿ ಹ್ಹೀ ಅಂತಾರೆ ಎಂದು ಸಿ.ಎಂ. ಇಬ್ರಾಹಿಂ ಅವರು ರಾಯಚೂರಿನ ಮುದಗಲ್‌ನಲ್ಲಿ ಇತ್ತೀಚೆಗಷ್ಟೇ ಹೇಳಿದ್ದರು.

ಈ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಬಿ. ಮಂಜಮ್ಮ ಜೋಗತಿ ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಇಬ್ರಾಹಿಂ ಹೇಳಿಕೆಯ ವರದಿಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಅವರು, ನನ್ನ ತಂದೆ ಕೂಡ ಹೀಗೆ ಹೇಳಿದ್ದರು. ಗಂಡಾಗಿದ್ದರೆ ಕೆಲಸ ಕೊಡಿಸುತ್ತಿದ್ದೆ, ಹೆಣ್ಣಾಗಿದ್ದರೆ ಮದುವೆ ಮಾಡಿಸುತ್ತಿದ್ದೆ. ಕುರುಡ ಕುಂಟ ಆಗಿದ್ದರೆ ಮನೆಯಲ್ಲೇ ಇರಿಸಿಕೊಂಡು ಊಟ ಹಾಕುತ್ತಿದ್ದೆ.

ನಾನು ಮಂಗಳಮುಖಿ, ಕಲಾವಿದೆ, ಕನ್ನಡತಿ. ಸಮಾಜ ಗೌರವಿಸುತ್ತಿದೆ ನಮ್ಮನ್ನು. ಹೀಗೆ ಅವಮಾನ ಮಾಡಬಾರದಿತ್ತು ಸರ್. ನಿಮ್ಮ ರಾಜಕೀಯಕ್ಕೆ ನೀವು ಕೈ ತಟ್ಟಿದ್ದೀರಿ ಇವತ್ತು ಎಂದು ಟ್ವೀಟ್ ನಲ್ಲಿ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...